ಇಬ್ಬರು ಪೊಲೀಸರ ಮೇಲೆ ಹಲ್ಲೆ

ಹರಪನಹಳ್ಳಿ: ತಾಲೂಕಿನ ಕರೇಕಾನಹಳ್ಳಿಯಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ರಸ್ತೆ ಕಾಮಗಾರಿ ಉದ್ಘಾಟನೆ ವೇಳೆ ವ್ಯಕ್ತಿಯೊಬ್ಬ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಕರೇಕಾನಹಳ್ಳಿಯ ಹನುಮಂತ ಹಲ್ಲೆ ಮಾಡಿದವ. ಶಾಸಕಿ ಎಂ.ಪಿ.ಲತಾ ಅವರು ರಸ್ತೆ ಕಾಮಗಾರಿ ಉದ್ಘಾಟನೆಗೆಂದು ಗ್ರಾಮಕ್ಕೆ ತೆರಳಿದಾಗ ಅವರ ಬಂದೋಬಸ್ತ್‌ಗಾಗಿ ಹರಪನಹಳ್ಳಿ ಠಾಣೆ ಪೇದೆಗಳಾದ ಗುರುಬಸವರಾಜ್ ಡಿ. ಹಾಗೂ ಗೋಪಿಚಂದ್ ಆರ್. ತೆರಳಿದ್ದರು.

ಈ ವೇಳೆ ಹನುಮಂತ ಎಂಬುವರು ನಾನು ಶಾಸಕರೊಂದಿಗೆ ಮಾತನಾಡಬೇಕೆಂದು ಹಠ ಹಿಡಿದಿದ್ದಾನೆ. ಪೊಲೀಸರು ಉದ್ಘಾಟನೆ ಕಾರ್ಯಕ್ರಮ ಬಳಿಕ ಮಾತನಾಡಿ ಎಂದಿದ್ದಾರೆ. ಇದನ್ನು ಕೇಳದ ಹನುಮಂತ, ಗಲಾಟೆ ಮಾಡಿದ್ದಾನೆ. ಸುಮ್ಮನಿರಲು ಹೇಳಿದಾಗ ಪೊಲೀಸರ ಮೇಲೆ ಕಟ್ಟಿಗೆ ಹಾಗೂ ಕೈಯಿಂದ ಹಲ್ಲೆ ಮಾಡಿದ್ದಾನೆ. ಹನುಮಂತನನ್ನು ವಶಕ್ಕೆ ಪಡೆದ ಪೊಲೀಸರು, ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಚಿಲ್ಲಿ ಚೀಸ್​​ ನೂಡಲ್ಸ್​​; ಇಲ್ಲಿದೆ ಸಿಂಪಲ್​ ವಿಧಾನ | Recipe

ಫ್ಯಾಮಿಲಿ ಜತೆ ಹೋಟೆಲ್​ಗೆ ಹೋದರೆ ಫ್ರೈಡ್​ರೈಸ್​​, ನೂಡಲ್ಸ್​​, ಗೋಬಿ ಹೀಗೆ ಚೈನೀಸ್​​​ ಫುಡ್ ಮೊದಲ ಆಯ್ಕೆಯಾಗಿರುತ್ತದೆ.…

ಈ ಕಾಯಿಲೆಯಿಂದ ಬಳಲುತ್ತಿರುವವರು ತಪ್ಪಾಗಿಯೂ ಬೀಟ್ರೂಟ್​ ಸೇವಿಸಬೇಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಯಾಗಿದೆ. ಇದು ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ…

ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡು ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟುವುದು ಅತ್ಯಂತ ಜನಪ್ರಿಯ ವಿಧಾನವಾಗಿದೆ. ಪ್ರಪಂಚದಾದ್ಯಂತ ಅಂದಾಜು 250…