ಬೆಳಗಾವಿ: ಒಂದೇ ರಾತ್ರಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸುರೇಶ್ ಆರ್ ತಹಶಿಲ್ದಾರ ಮತ್ತು ದುಂಡಪ್ಪ ಮಗದೂಮ್ ಮೃತ ಪೊಲೀಸರು. ಈ ಇಬ್ಬರು ಹಲವು ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಶಸ್ತ್ರ ಮೀಸಲು ಉಪ ನಿರೀಕ್ಷಕ ಸುರೇಶ್ ಅವರು ಲಿವರ್ ತೊಂದರೆಯಿಂದ ಬಳಲುತ್ತಿದ್ದರೆ, ಸಶಸ್ತ್ರ ಪಡೆಯ ಮುಖ್ಯ ಪೇದೆ ದುಂಡಪ್ಪ ಮಗದೂಮ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಇದಕ್ಕಾಗಿ ಹಲವು ದಿನಗಳಿಂದ ಬೆಳಗಾವಿ ಹಾಗೂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೇ ದುರದೃಷ್ಟವಶಾತ್ ಬೆಳಗಾವಿಯಲ್ಲಿ ಒಂದೇ ರಾತ್ರಿಯಲ್ಲಿ ಈ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ. ಮೃತರಿಗೆ ಸಹೋದ್ಯೋಗಿಗಳು ಹಾಗೂ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಂತಪಾ ಸೂಚಿಸಿದ್ದಾರೆ. (ದಿಗ್ವಿಜಯ ನ್ಯೂಸ್)