ತುಮಕೂರು: ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಮಕ್ಕಳಿಬ್ಬರು ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿಂದು (ಏಪ್ರಿಲ್ 20) ನಡೆದಿದೆ.
ಪ್ರಜ್ವಲ್ (14) ಹಾಗೂ ನೀತಿಶ್ (15) ಮೃತ ದುರ್ದೈವಿಗಳು. ಬೇಸಿಗೆ ರಜೆಯ ಮೂಡ್ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮೃತ ನಿತೀಶ್ ತನ್ನ ಚಿಕ್ಕಪ್ಪನ ಮನೆಗೆ ಬಂದಿದ್ದ. ಇಂದು ಬೆಳಗ್ಗೆ 8:30 ರ ಸುಮಾರಿಗೆ ತನ್ನ ಸ್ನೇಹಿತ ಪ್ರಜ್ವಲ್ ಜೊತೆ ಆಟವಾಡುತ್ತಿದ್ದ. ಇಬ್ಬರು ಮನೆಯ ಮಹಡಿಯಲ್ಲಿ ಆಟವಾಡಿತ್ತಿದ್ದರು. ಮನೆಯ ಮುಂಭಾಗವೇ ಹಾದುಹೋಗಿರುವ ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಇಲಿಯಾನಾ! ಗೋವಾ ಬ್ಯೂಟಿಗೆ ಹರಿದುಬಂತು ಪ್ರಶ್ನೆಗಳ ಸುರಿಮಳೆ
ಮೃತ ನಿತೀಶ್ ತುಮಕೂರು ತಾಲೂಕಿನ ಕುಂದೂರು ಗ್ರಾಮದ ವೀರಭದ್ರಯ್ಯ ಎಂಬುವವರ ಮಗ. ಪ್ರಜ್ವಲ್ ಬೆಳಗುಂಬ ಗ್ರಾಮದ ಸಿದ್ದಲಿಂಗಯ್ಯ ಎಂಬುವವರ ಮಗ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಕೆಇಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯರು ಕೆಇಬಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೇ ಇಬ್ಬರು ಯುವಕರ ಸಾವಿಗೆ ಕಾರಣ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಇಲಿಯಾನಾ! ಗೋವಾ ಬ್ಯೂಟಿಗೆ ಹರಿದುಬಂತು ಪ್ರಶ್ನೆಗಳ ಸುರಿಮಳೆ
ನಿಯಮ ಉಲ್ಲಂಘಿಸಿದರೆ ಬಿಡಲ್ಲ ಕ್ಯಾಮರಾ ಕಣ್ಣು! ದಂಡ ಕಟ್ಟಿಲ್ಲ ಎಂದರೆ ಮನೆ ಬಾಗಿಲಿಗೇ ಬರುತ್ತಾರೆ ಟ್ರಾಫಿಕ್ ಪೊಲೀಸರು…