ಚಿಕ್ಕಮಗಳೂರು: ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ನಡೆದಿದೆ.
ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ ಮೃತ ದುರ್ದೈವಿಗಳು. ಇಬ್ಬರು 14 ವಿಧ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು. ಈ ವೇಳೆ ರಕ್ಷಿತ್ ನೀರಿನಲ್ಲಿ ಸಿಲುಕಿಕೊಂಡಿದ್ದ. ಆತನ ರಕ್ಷಣೆಗೆಂದು ಪ್ರಜ್ವಲ್ ತೆರಳಿದಾಗ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಸೀರಿಯಲ್ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ!
ಇಬ್ಬರು ಶೃಂಗೇರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರ ಸಾವಿನ ಸುದ್ದಿ ತಿಳಿದ ಕೂಡಲೇ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
VIDEO| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸಹಪಾಠಿ; ಆತ್ಮಹತ್ಯೆಗೆ ಶರಣು
ಸೀರಿಯಲ್ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ!
1200 ರೂ. ಬೆಲೆಯ ಐಪಿಎಲ್ ಟಿಕೆಟನ್ನು 8 ಸಾವಿರಕ್ಕೆ ಪೊಲೀಸರೇ ಮಾರುತ್ತಿದ್ದಾರೆ; ಆರ್ಸಿಬಿ ಅಭಿಮಾನಿಗಳ ಆಕ್ರೋಶ