ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ವಿಷಯ ತಡವಾಗಿ ಹೊರಬಿದ್ದಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ರಣಧೀರ್ ಕುಮಾರ್ (36) ಮತ್ತು ರಾಹುಲ್ ಪ್ರತಾಪ್ (31) ಮೃತಪಟ್ಟವರು. ಇದರಲ್ಲಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ಅನಾರೋಗ್ಯಗೊಂಡು ಕೊನೆಯುಸಿರೆಳೆದಿದ್ದಾನೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಐಎಸ್ಸಿಯಲ್ಲಿ ರಣಧೀರ ಕುಮಾರ್ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ರಾಹುಲ್ ಪ್ರತಾಪ್ ಎಂ.ಟೆಕ್ ವಿದ್ಯಾರ್ಥಿಯಾಗಿದ್ದ. ರಣಧೀರ ಕುಮಾರ್ ತಾನಿದ್ದ ರೂಮ್ನಲ್ಲೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಇನ್ನು ರಾಹುಲ್ ಪ್ರತಾಪ್ ಫುಟ್ಬಾಲ್ ಆಡುವಾಗ ಪಲ್ಸ್ ರೇಟ್ ಕಡಿಮೆಯಾಗಿ ಮೃತಪಟ್ಟಿದ್ದಾನೆ. ಇಬ್ಬರೂ ವಿದ್ಯಾರ್ಥಿಗಳ ಹೆಚ್ಚಿನ ವಿವರ ಇನ್ನಷ್ಟೇ ಹೊರಬೀಳಬೇಕಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಹೃದಯವೇ ಬಾಯಿಗೆ ಬಂದಂತಾಗಿತ್ತು; ನಟಿ ಪಾರುಲ್ ಯಾದವ್ಗೆ ಅಷ್ಟು ಭಯವಾಗಿದ್ದೇಕೆ?
ಆ್ಯಸಿಡ್ ದಾಳಿಯಿಂದಾಗಿ ಕಣ್ಣು ಕಳೆದುಕೊಂಡಳು, ರೂಪ ಕಳೆದುಕೊಂಡಳು; ಆದ್ರೂ ಮದುವೆ ಆಗಲು ಹುಡುಗ ಸಿಕ್ಕಿದ…