More

    ಮೊಗವೀರರ ಒಗ್ಗಟ್ಟು ಮಾದರಿ: ಅದಮಾರು ಶ್ರೀ

    ಪಡುಬಿದ್ರಿ: ಒಗ್ಗಟ್ಟಿದ್ದರೆ ಸಕಲವನ್ನೂ ಸಾಧಿಸಬಹುದು ಎಂಬುದಕ್ಕೆ ಮೊಗವೀರ ಸಮಾಜದ ಸಂಘಟನಾತ್ಮಕ ಚಟುವಟಿಕೆಗಳೇ ಸಾಕ್ಷಿ. ಮೊಗವೀರರ ಒಗ್ಗಟ್ಟು ಅನುಕರಣೀಯ ಎಂದು ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.
    ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಸಮಗ್ರ ಜೀರ್ಣೋದ್ಧಾರ ಅಂಗವಾಗಿ ದೇವಳದ ನೂತನ ಗರ್ಭಗುಡಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ಸುಮಾರು 32 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ನಡೆಯಲಿದೆ.
    ದೇವಳದ ತಂತ್ರಿ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆ, ಮುಖ್ಯ ಅರ್ಚಕ ರಾಘವೇಂದ್ರ ಉಪಾಧ್ಯಾಯ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಜಿ.ಶಂಕರ್ ಅಧ್ಯಕ್ಷತೆ ವಹಿಸಿದ್ದರು. ವಾಸ್ತುತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಅಂಬಲಪಾಡಿ ದೇವಳ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್, ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯ ಗಂಗಾಮತಸ್ಥರ ಸಂಘದ ಅಧ್ಯಕ್ಷ ಬಿ.ಮೌಲಾಲಿ, ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಹಿರಿಯ ಅರ್ಚಕ ವೆಂಕಟರಮಣ ಉಪಾಧ್ಯಾಯ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ.ಅಮೀನ್ ಸ್ವಾಗತಿಸಿದರು. ಚಂದ್ರೇಶ್ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.
    ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಜಿ.ಶಂಕರ್, ಮೊಗವೀರ ಸಮಾಜವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವ ಪ್ರಕ್ರಿಯೆಗೆ ಜನಪ್ರತಿನಿಧಿಗಳು ಬದ್ಧರಾಗಬೇಕು. ಅದೇ ರೀತಿ ಶೈಕ್ಷಣಿಕ ಕೇಂದ್ರವಾಗಿ ಮೂಡಿಬರಲಿರುವ ಉಚ್ಚಿಲ ದೇವಳದ ಸಮಗ್ರ ಅಭಿವೃದ್ಧಿಗೆ ಅನುದಾನ ದೊರಕಿಸಿಕೊಡಬೇಕು ಎಂದರು.
    ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಬಾರ್ಕೂರು ಬೆಣ್ಣೆಕುದ್ರು ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್, ಕೆಎಫ್‌ಡಿಸಿ ಅಧ್ಯಕ್ಷ ನಿತಿನ್ ಕುಮಾರ್, ಮುಂಬೈ ಮೊಗವೀರ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಕೆ.ಎಲ್.ಬಂಗೇರ, ದೇವಳದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರಿಯಪ್ಪ ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಕೃಷ್ಣ ಸುವರ್ಣ, ಬೆಂಗಳೂರು ಮೊಗವೀರ ಸಂಘ ಅಧ್ಯಕ್ಷ ಚೇತನ್ ಜಿ., ಮುಂಬೈ ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸದಾನಂದ ಕೋಟ್ಯಾನ್, ಮುಂಬೈ ಮೊಗವೀರ ವ್ಯವಸ್ಥಾಪಕ ಮಂಡಳಿ ಟ್ರಸ್ಟಿ ಅಜಿತ್ ಸುವರ್ಣ, ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಅಧ್ಯಕ್ಷ ಶಶಿಕುಮಾರ್ ಮೆಂಡನ್, ಬಗ್ವಾಡಿ ಮೊಗವೀರ ಮಹಾಜನ ಸೇವಾ ಸಂಘದ ಶಾಖಾ ಅಧ್ಯಕ್ಷ ಕೆ.ಕೆ.ಕಾಂಚನ್, ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಶಿವರಾಮ್ ಕೆ.ಎಂ., ಬಾರ್ಕೂರು ವಲಯ ಅಧ್ಯಕ್ಷ ಸತೀಶ್ ಅಮೀನ್, ಕಾಪು-ಸುರತ್ಕಲ್ ವಲಯ ಅಧ್ಯಕ್ಷ ಸುಕುಮಾರ್ ಶ್ರೀಯಾನ್, ಮೊಗವೀರ ಯುವ ವೇದಿಕೆ ಅಧ್ಯಕ್ಷ ಜಗದೀಶ್ ಬಂಗೇರ, ಮೊಗವೀರ ಹಿತಸಾಧನಾ ವೇದಿಕೆ ಅಧ್ಯಕ್ಷ ಪುಷ್ಪರಾಜ್ ಕೋಟ್ಯಾನ್, ಮೊಗವೀರ ಮಹಿಳಾ ಸಂಘದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದೇವಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ.ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮೊಗವೀರ ಮಹಿಳಾ ಸಂಘ ಅಧ್ಯಕ್ಷೆ ಅಪ್ಪಿ ಎಸ್.ಸಾಲ್ಯಾನ್, ಉದ್ಯಮಿ ಯು.ಗಣೇಶ್ ಉದ್ಯಾವರ ಉಪಸ್ಥಿತರಿದ್ದರು.

    10 ಕೋಟಿ ರೂ. ಅನುದಾನ ಭರವಸೆ: ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸವಾಲುಗಳ ಮಧ್ಯೆ ಬದುಕುವ ಸಮಾಜ ಮೊಗವೀರ ಸಮಾಜ. ಸಮಗ್ರವಾಗಿ ಪುನಃ ನಿರ್ಮಾಣಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮಿದೇವಳ ಎಲ್ಲ ಸಮಾಜದವರನ್ನು ಒಗ್ಗೂಡಿಸುವ ಧರ್ಮ ಚಾವಡಿಯಾಗಲಿ. ದೇವಳದ ಮರು ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ. ಅನುದಾನ ಒದಗಿಸಿಕೊಡಲು ಬದ್ಧನಿದ್ದೇನೆ. ಮೊಗವೀರ ಸಮಾಜವನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆಗೊಳಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಹೇಳಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮುದಾಯದವರ ಸಮರ್ಪಣಾ ಮನೋಭಾವ, ಶ್ರದ್ಧಾಭಕ್ತಿಯ ಸೇವೆಯೊಂದಿಗೆ ದೇಗುಲ ಶೀಘ್ರ ನಿರ್ಮಾಣಗೊಂಡು ಇಡೀ ರಾಜ್ಯದ ಪುಣ್ಯಕ್ಷೇತ್ರವಾಗಿ ಮೂಡಿ ಬರಲಿ ಎಂದು ಹಾರೈಸಿದರು.

    ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿ, ನಾವು ರಫ್ತು ಮಾಡುವಂತೆ ಮಹಾಲಕ್ಷ್ಮೀ ದೇವಿ ಅನುಗ್ರಹಿಸಲಿ. ಈ ಮೂಲಕ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಂಡು ಭಾರತವು ವಿಶ್ವಕ್ಕೇ ಅಗ್ರಸ್ಥಾನಿಯಾಗಲಿ. ನಿಗದಿತ ಸಮಯದಲ್ಲಿ ಭವ್ಯ ದೇಗಲ ನಿರ್ಮಾಣಗೊಂಡು ಭಗವದ್ಭಕ್ತರು ನಿತ್ಯ ದೇಗುಲಕ್ಕೆ ಭೇಟಿ ನೀಡುವಂತಾಗಲಿ.
    | ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಅದಮಾರು ಮಠ

    ರಾಜ್ಯ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ 4,500 ಕೋಟಿ ರೂ. ಬೃಹತ್ ಯೋಜನೆ ಹಮ್ಮಿಕೊಂಡಿದ್ದು, ಈ ಮೂಲಕ ಬಂದರು, ಬೀಚ್ ಸಹಿತ ಮೂಲ ಸೌಕರ್ಯಗಳ ಬಗ್ಗೆ ಒತ್ತು ನೀಡಲು ನಿರ್ಧರಿಸಲಾಗಿದೆ. ಶೀಘ್ರ ಯೋಜನೆ ಜಾರಿಯಾಗಲಿದೆ. ಉಚ್ಚಿಲ ದೇವಳದ ಅಭಿವೃದ್ಧಿಗೆ 10 ಕೋಟಿ ರೂ. ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.
    | ಶೋಭಾ ಕರಂದ್ಲಾಜೆ ಸಂಸದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts