More

    ಮಾರ್ಚ್​ನಲ್ಲಿ ಅಯೋಧ್ಯೆಗೆ ಭೇಟಿ ಕೊಡಲಿದ್ದಾರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ; ಸಂಜಯ್​ ರಾವತ್

    ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯವರು 2020ರ ಮಾರ್ಚ್​ 7ರಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಶಿವಸೇನೆ ಮುಖಂಡ ಸಂಜಯ್​ ರಾವತ್​ ಇಂದು ತಿಳಿಸಿದ್ದಾರೆ.

    ಸಂಜಯ್​ ರಾವತ್​ ಅವರು ಟ್ವೀಟ್​ ಮೂಲಕ ಈ ವಿಚಾರ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಕಾಸ ಅಘಾಡಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಮಾರ್ಚ್​ಗೆ 100 ದಿನಗಳು ಪೂರ್ಣವಾಗುತ್ತವೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

    2019ರ ನವೆಂಬರ್​ 28ರಂದು ಉದ್ಧವ್​ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಅವರು ಮಾರ್ಚದಲ್ಲೇ ಮೊದಲಬಾರಿಗೆ ಅಯೋಧ್ಯಾಕ್ಕೆ ಭೇಟಿ ನೀಡಿದಂತಾಗುತ್ತದೆ. ಅಯೋಧ್ಯೆಯಲ್ಲಿ ಸದ್ಯ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts