More

    ಸಕಾಲದಲ್ಲಿ ಉಡುಪಿಗೆ ಮೊದಲ ಸ್ಥಾನ

    ಉಡುಪಿ: ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಜೂನ್ ತಿಂಗಳ ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ.

    ಅರ್ಜಿ ವಿಲೇವಾರಿಗೆ ಕನಿಷ್ಠ 3 ದಿನಗಳಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕಂದಾಯ ಇಲಾಖೆ ಮತ್ತು ಇತರ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ.

    ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ನಿಗದಿತ ಅವಧಿಗೂ ಮುಂಚಿತವಾಗಿ ವಿಲೇವಾರಿ ಮಾಡುವುದು, ಅವಧಿ ಮೀರಿ ಅರ್ಜಿಗಳ ವಿಲೇವಾರಿ, ಅರ್ಜಿಗಳ ತಿರಸ್ಕರಿಸುವಿಕೆ ಮತ್ತು 1 ಲಕ್ಷ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಅರ್ಜಿ ಸ್ವೀಕೃತಿ- ಹೀಗೆ 4 ಅಂಶಗಳನ್ನು ಪರಿಗಣಿಸಿ ತಿಂಗಳ ಕೊನೆಯಲ್ಲಿ ರ‌್ಯಾಂಕ್ ನೀಡಲಾಗುತ್ತದೆ. ಅದರಂತೆ ಸಕಾಲ (ಆನ್‌ಲೈನ್)ದಲ್ಲಿ ಅರ್ಜಿಗಳನ್ನು ಹೆಚ್ಚು ಜನರು ಸಲ್ಲಿಸಿದ್ದು, ಅರ್ಜಿಗಳನ್ನು ಹೆಚ್ಚು ತಿರಸ್ಕರಿಸದೆ ಅಧಿಕಾರಿಗಳು ಅವಧಿಗೂ ಮುಂಚಿತ ವಿಲೇವಾರಿ ಮಾಡಿದ್ದಾರೆ. ಇದೇ ಕಾರಣದಿಂದ ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಲಭಿಸಿದೆ.

    ಜಿಲ್ಲಾಡಳಿತ ಅಭಿನಂದನೆ: ಜೂನ್ ತಿಂಗಳ ಸಕಾಲ ಸೇವೆಯಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಕಾರಣರಾಗಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿನಂದನೆ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts