ಶಿರಸಿ: ಮನೆಯಲ್ಲಿ ವಿವಾಹಕ್ಕೆ ಒಪ್ಪಿಗೆ ಸಿಗದ ಕಾರಣಕ್ಕೆ ಪ್ರೇಮಿಗಳಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಣ್ಣೆಹೊಳೆ ಫಾಲ್ಸ್ ಬಳಿ ನಡೆದಿದೆ.
ಬೊಮ್ಮನಕೊಡ್ಲುವಿನ ವಿಕ್ರಮ ಮಾವಿನಕುರ್ವೆ (28) ಹಾಗೂ ತೆರಕನಹಳ್ಳಿಯ ಮೇಘನಾ ನಾಯ್ಕ (27) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ. ನಾಲ್ಕೈದು ದಿನಗಳ ಹಿಂದೆ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಿಪಿಐ ಪ್ರದೀಪ ಬಿ.ಯು. ಸ್ಥಳ ಪರಿಶೀಲಿಸಿದ್ದು, ಗ್ರಾಮೀಣ ಠಾಣೆ ಪಿಎಸ್ಐ ನಂಜಾ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
‘ಎಷ್ಟು ಕರೆ ಮಾಡಿದ್ರೂ ಸ್ವೀಕರಿಸದ ರೋಹಿಣಿ ಸಿಂಧೂರಿ ಒಂದೇ ಮೆಸೇಜ್ಗೆ ಅವರೇ ಫೋನ್ ಮಾಡಿದ್ರು’
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…