More

    ಉಡುಪಿಯಲ್ಲಿ 3ನೇ ಕರೊನಾ ಸೋಂಕಿತ ಗುಣಮುಖ

    ಉಡುಪಿ: ಜಿಲ್ಲೆಯ ಮೂರನೇ ಕರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿ ಶನಿವಾರ ಮಧ್ಯಾಹ್ನ 2.55ಕ್ಕೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯ ಎಲ್ಲ್ಲ ಮೂರೂ ಕರೊನಾ ಸೋಂಕಿತರು ಗುಣಮುಖರಾಗಿದ್ದು, ಜನತೆಯ ಆತಂಕ ದೂರವಾಗಿದೆ. 3ನೇ ಸೋಂಕಿತ ವ್ಯಕ್ತಿಯ ವರದಿ ಶನಿವಾರ ನೆಗೆಟಿವ್ ಬಂದಿದೆ. ಈತನ ಗಂಟಲ ದ್ರವ ಮಾದರಿಯನ್ನು ಮೂರು ಬಾರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ಕೇರಳಕ್ಕೆ ಹೋಗಿದ್ದರು. ವಾಪಸ್ ಬರುವಾಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ತಪಾಸಣೆಗೆ ಒಳಪಡಿಸಿ ವ್ಯಕ್ತಿಯ ಲಕ್ಷಣವನ್ನು ಗಮನಿಸಿ ಅಂಬ್ಯುಲೆನ್ಸ್‌ನಲ್ಲಿ ಕರೆತಂದು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ವ್ಯಕ್ತಿಗೆ ಕರೊನಾ ಪಾಸಿಟಿವ್ ಬಂದಿತ್ತು. ಕೊವಿಡ್ ವಿಶೇಷ ಆಸ್ಪತ್ರೆಯಾಗಿರುವ ಡಾ.ಟಿ.ಎಂ.ಎ ಪೈ ಆಸ್ಪತ್ರೆ ಐಸೊಲೇಶನ್ ವಾರ್ಡ್‌ನಲ್ಲಿ ವ್ಯಕ್ತಿಯನ್ನು ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವ್ಯಕ್ತಿ ಮಾ.27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. 14 ದಿನ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗಡಿಯಲ್ಲಿ ತಪಾಸಣೆಗೆ ಒಳಪಡಿಸಿ ತಕ್ಷಣ ಆಸ್ಪತ್ರೆ ಕ್ವಾರಂಟೈನ್ ಮಾಡಿದ್ದರಿಂದ ಈ ವ್ಯಕ್ತಿ ಜಿಲ್ಲೆಯಲ್ಲಿ ಯಾರ ಸಂಪರ್ಕಕ್ಕೂ ಬಂದಿರಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts