ಉಡುಪಿ: ಯುವತಿ ರಕ್ಷಿತಾ ನಾಯಕ್ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಪ್ರಶಾಂತ್ ಕುಂದರ್ನನ್ನು ಉಡುಪಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲಯಲ್ಲಿ ಆತನನ್ನು ಬಂಧಿಸಲಾಗಿದೆ. ಆರೋಪಿ ಪ್ರಶಾಂತ್ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: VIDEO| ಇನ್ನೇನು ತಾಳಿ ಕಟ್ಟಬೇಕು ಅಷ್ಟರಲ್ಲಿ ವಧು ಹೇಳಿದ ಮಾತು ಕೇಳಿ ವರನಿಗೆ ಬಿಗ್ ಶಾಕ್!
ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿ, ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ರಕ್ಷಿತಾ ನಾಯಕ್, ಅ.24ರ ರಾತ್ರಿ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಅಂದು ಸಂಜೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆತಂದ ಪ್ರಶಾಂತ್ ಕುಂದರ್, ಆಸ್ಪತ್ರೆಯ ಸ್ಟ್ರೆಚ್ಚರ್ಗೆ ಹಾಕಿ ಎಸ್ಕೇಪ್ ಆಗಿದ್ದ. ಇದಾದ ಕೆಲವೇ ಕ್ಷಣದಲ್ಲಿ ಯುವತಿ ಮೃತಪಟ್ಟಿದ್ದಳು. ಆಕೆಯ ಪಾಲಕರಿಗೂ ಆತನೇ ಕರೆ ಮಾಡಿ ವಿಷಯ ತಿಳಿಸಿದ್ದ. ಬಳಿಕ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದ.
ಮಗಳು ರಕ್ಷಿತಾಳ ಸಾವು ಅನುಮಾನಾಸ್ಪದ ಎಂದು ಪಾಲಕರು ದೂರು ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಪ್ರಶಾಂತ್ ಕುಂದರ್ನನ್ನು ಕಳೆದ ಸೋಮವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಬಂಧಿಸಲಾಗಿದೆ. (ದಿಗ್ವಿಜಯ ನ್ಯೂಸ್)
ಉಡುಪಿ ಯುವತಿ ಅನುಮಾನಾಸ್ಪದ ಸಾವು ಪ್ರಕರಣ: ಕಾಲ್ ರೆಕಾರ್ಡ್ಸ್ನಲ್ಲಿ ಸ್ಫೋಟಕ ಮಾಹಿತಿ..!