ಭಾರಿ ಮಳೆಗೆ ಉಡುಪಿ ತತ್ತರ: 50 ಕುಟುಂಬಗಳ ರಕ್ಷಣೆ,‌ ಎನ್​ಡಿಆರ್​ಎಫ್ ದೌಡು

ಉಡುಪಿ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಭಾರಿಗೆ ಭಾರಿ ನೆರೆ ಹಾವಳಿಯಿಂದ ಉಡುಪಿ ನಗರದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೃತಕ‌ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ. ಅಂಬಲಪಾಡಿ, ಮಠದ ಬೆಟ್ಟು, ಗುಂಡಿಬೈಲು, ಬನ್ನಂಜೆ,‌ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ವಿಜಯವಾಣಿಗೆ ತಿಳಿಸಿದ್ದಾರೆ. ಉಡುಪಿ ಪೊಲೀಸರು, ಅಗ್ನಿಶಾಮಕ ದಳ ತಡರಾತ್ರಿಯಿಂದ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. … Continue reading ಭಾರಿ ಮಳೆಗೆ ಉಡುಪಿ ತತ್ತರ: 50 ಕುಟುಂಬಗಳ ರಕ್ಷಣೆ,‌ ಎನ್​ಡಿಆರ್​ಎಫ್ ದೌಡು