ಉಡುಪಿ: ಕೃಷ್ಣ ಮಠದಲ್ಲಿ ದೇವರ ದರ್ಶನದ ಸಮಯ ಮಿತಿಯನ್ನು ಸಡಿಸಲಾಗಿದ್ದು, ನ. 4ರಿಂದ ಬೆಳಗ್ಗೆ 8.30ರಿಂದ 10ರವರೆಗೆ ಹಾಗೂ ಈ ಹಿಂದಿನಂತೆ ಮಧ್ಯಾಹ್ನ 2 ರಿಂದ ಸಾಯಂಕಾಲ 6 ಗಂಟೆವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ. ಪರ್ಯಾಯ ಪೀಠಾಧಿಪತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಸೂಚನೆಯಂತೆ ಸೆ. 28ರಿಂದ ಮಧ್ಯಾಹ್ನ 2 ರಿಂದ ಸಾಯಂಕಾಲ 5 ಗಂಟೆಯವರೆಗೆ ಮಠದ ಒಳಭಾಗದಲ್ಲಿ ಕೃಷ್ಣನ ದರ್ಶನದ ವ್ಯವಸ್ಥೆಯನ್ನು ಭಕ್ತರಿಗೆ ಕಲ್ಪಿಸಲಾಗಿದ್ದು, ಈಗ ಸ್ಥಳೀಯ ಹಾಗೂ ಪರವೂರ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನದ ಸಮಯದಲ್ಲಿ ಹೆಚ್ಚಿನ ಬದಲಾವಣೆ ಮಾಡಲಾಗಿದೆ ಎಂದು ಮಠದ ವ್ಯವಸ್ಥಾಪಕ ಗೋವಿಂದರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.