ಮಿಷನ್​ ಕಾಂಪೌಂಡ್​ ರಸ್ತೆಗೆ 66 ಲಕ್ಷ ರೂ. ಅನುದಾನ

Yashpal

ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಿಷನ್​ ಕಾಂಪೌಂಡ್​ ರಸ್ತೆಗೆ ಕಾಂಕ್ರೀಟಿಕರಣ ಹಾಗೂ ಚರಂಡಿ ಕಾಮಗಾರಿಗೆ ನಗರಸಭೆ ವತಿಯಿಂದ 66 ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದೆ. ಕಾಮಗಾರಿ ಶ್ರೀ ಪೂರ್ಣಗೊಂಡು ಈ ಭಾಗದ ಜನತೆಯ ಬಹುದಿನದ ಬೇಡಿಕೆ ಈಡೇರಲಿದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಸಂತಸ ವ್ಯಕ್ತಪಡಿಸಿದರು.

blank

ಉಡುಪಿ ನಗರಸಭೆ ವತಿಯಿಂದ ನಡೆಯಲಿರುವ ಬೈಲೂರು ಮಿಷನ್​ ಕಾಂಪೌಂಡ್​ ಜಂಕ್ಷನ್​ ರಸ್ತೆ ಕಾಂಕ್ರೀಟಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಮಾ.31ರಂದು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜಿನಿ ಹೆಬ್ಬಾರ್​, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್​ ರತ್ನಾಕರ ಹೆಗ್ಡೆ, ನಗರಸಭಾ ಮಾಜಿ ಅಧ್ಯಕ್ಷ ಕಿರಣಕುಮಾರ್​ ಬೈಲೂರು, ನಗರಸಭಾ ಸದಸ್ಯರಾದ ಕೃಷ್ಣ ರಾವ್​ ಕೊಡಂಚ, ಬಾಲಕೃಷ್ಣ ಶೆಟ್ಟಿ, ಹರೀಶ ಶೆಟ್ಟಿ, ವಿಜಯಲಕ್ಷಿ$್ಮ, ಸ್ಥಳಿಯ ಮುಖಂಡರಾದ ರಂಜಿತ ದೇವಾಡಿಗ, ಅರುಣಕುಮಾರ್​, ದುರ್ಗಾಪ್ರಸಾದ, ಸುನೀಲ, ಪ್ರಮೋದ ಆಚಾರ್ಯ, ಸುರೇಶ ಶೆಟ್ಟಿ, ನಾರಾಯಣದಾಸ ಉಡುಪ, ನವೀವ ನಿಶ್ಚಲ, ವೆಂಕಟೇಶ ಪ್ರಭು, ರತ್ನಾಕರ ಜಿ.ಎಸ್​., ಶಾಂತಾ ಶೇರಿಗಾರ್​, ಶ್ರೀಪತಿ ಭಟ್​ ಇತರರಿದ್ದರು.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank