ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ‘ಪರಾರಿಯಾದ ಆರ್ಥಿಕ ಅಪರಾಧಿ’; ದೆಹಲಿ ಕೋರ್ಟ್‌| sanjay-bhandari

blank

ನವದೆಹಲಿ: ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ದೆಹಲಿ ನ್ಯಾಯಾಲಯವು ಇಂದು (05) ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿಯನ್ನು ‘ತಲೆಮರೆಸಿಕೊಂಡಿರುವ ಘೋಷಿತ ಅಪರಾಧಿ’ ಎಂದು ಘೋಷಿಸಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ:  ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್‌ ಜಾರಕಿಹೊಳಿ ಪುತ್ರ; ಸುಮೋಟೋ ಕೇಸ್ ದಾಖಲು| sumoto-case

ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ 2018 ರ ಅಡಿಯಲ್ಲಿ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಣೆ ಹೊರಡಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ಮೇಲೆ ಹಣ ವರ್ಗಾವಣೆ ಆರೋಪ ಹೊರಿಸಿ ಅರ್ಜಿ ಸಲ್ಲಿಸಿತು ಮತ್ತು ಹಲವಾರು ತನಿಖಾ ಸಂಸ್ಥೆಗಳು ಅವರ ಚಟುವಟಿಕೆಗಳನ್ನು ಪರಿಶೀಲಿಸಲು ಪ್ರಾರಂಭಿಸಿದ ನಂತರ 2016 ರಲ್ಲಿ ಸಂಜಯ್ ಭಂಡಾರಿ ಯುಕೆಗೆ “ತಪ್ಪಿಸಿಕೊಂಡರು” ಎಂದು ಹೇಳಲಾಗಿದೆ.
ನಂತರ 2020 ರಲ್ಲಿ ED ಯಿಂದ ಔಪಚಾರಿಕ ಚಾರ್ಜ್‌ಶೀಟ್ ಸಲ್ಲಿಸಲಾಯಿತು. 2016 ರಲ್ಲಿ ಐಟಿ ಇಲಾಖೆ ದೆಹಲಿಯಲ್ಲಿರುವ ಅವರ ಕಚೇರಿಯ ಮೇಲೆ ದಾಳಿ ಮಾಡಿದ ಸ್ವಲ್ಪ ಸಮಯದ ನಂತರ 63 ವರ್ಷ ವಯಸ್ಸಿನ ಭಂಡಾರಿ ಲಂಡನ್‌ಗೆ ತೆರಳಿದರು. ಅದಾದ ಸ್ವಲ್ಪ ಸಮಯದ ನಂತರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ED ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: 2025 ರ ಬಿಗ್ ಬಾಸ್ ಸೀಸನ್​ 9; ಸಾಮಾನ್ಯರಿಗೂ ಅವಕಾಶ; 1 ಲಕ್ಷಕ್ಕೂ ಹೆಚ್ಚು ಸ್ಪರ್ಧಿಗಳಿಂದ ಅರ್ಜಿ ಸಲ್ಲಿಕೆ| bigg-boss

ಇಡಿ ಪ್ರಕಾರ, ಭಂಡಾರಿ 2016 ರಿಂದ ಯುಕೆಯಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಹಸ್ತಾಂತರಿಸುವಂತೆ ಕೋರಿ ಭಾರತ ಸಲ್ಲಿಸಿದ ಅರ್ಜಿಯನ್ನು ಇತ್ತೀಚೆಗೆ ಯುಕೆ ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯವು ಈಗ ಭಂಡಾರಿಯನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿರುವುದರಿಂದ, ಜಾರಿ ನಿರ್ದೇಶನಾಲಯವು ಭಂಡಾರಿಯವರ ಆಸ್ತಿಗಳು ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಮತ್ತು ವಶಪಡಿಸಿಕೊಳ್ಳುವ ಪ್ರಯತ್ನಗಳನ್ನು ತೀವ್ರಗೊಳಿಸುವ ನಿರೀಕ್ಷೆಯಿದೆ.
(ಏಜೆನ್ಸೀಸ್)

ಹೃದಯ ಸ್ತಂಭನದ ಆರಂಭಿಕ 5 ಲಕ್ಷಣಗಳಾವುವು? ಹೃದಯಾಘಾತವಾದಾಗ ಮೊದಲು ಏನು ಮಾಡಬೇಕು? heart-attack

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…