ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 14 ಸಾವಿರ ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್ಗೆ (ಯುಕೆ) ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಯುಕೆ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎನ್ನುವ ಕಡತಕ್ಕೆ ಯುಕೆ ಸರ್ಕಾರದ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರು ಶುಕ್ರವಾರ ಸಹಿ ಮಾಡಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದನ್ನೂ ಓದಿ: ಎರಡು ಷರ್ಟ್ ಕದ್ದಿದ್ದಕ್ಕೆ 20 ವರ್ಷ ಜೈಲುವಾಸ! ಬಿಡುಗಡೆಯಾಗುವಷ್ಟರಲ್ಲೇ ಮೃತ್ಯುಕೂಪವಾಗಿದ್ದ ಮನೆ…
ಕಳೆದ ತಿಂಗಳು ಲಂಡನ್ನ ವೆಸ್ಟ ಮಿನಿಸ್ಟರ್ ಕೋರ್ಟ್ ನೀರವ್ ಮೋದಿಯ ಅರ್ಜಿಯನ್ನು ವಜಾಗೊಳಿಸಿತ್ತು. ಕೋವಿಡ್ ಇರುವ ಈ ಪರಿಸ್ಥಿತಿಯಲ್ಲಿ ಕೆಟ್ಟದಾಗಿರುವ ಭಾರತದ ಜೈಲುಗಳಿಗೆ ತನ್ನನ್ನು ಕಳಿಸಬಾರದು ಎಂದು ನೀರವ್ ಮೋದಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಗೃಹ ಸಚಿವಾಲಯಕ್ಕೆ ಸೂಚಿಸಿತ್ತು.
ಗೃಹ ಸಚಿವಾಲಯ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದೆಯಾದರೂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನೀರವ್ ಮೋದಿಗೆ ಅವಕಾಶ ನೀಡಲಾಗಿದೆ. ಭಾರತದ ಬ್ಯಾಂಕುಗಳಿಗೆ ಸುಮಾರು 14 ಸಾವಿರ ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ನೀರವ್ ಮೋದಿಯನ್ನು ಲಂಡನ್ನಲ್ಲಿ 2019 ರಲ್ಲಿ ಸಿಬಿಐ ಬಂಧಿಸಿತ್ತು. ಭಾರತಕ್ಕೆ ಹಸ್ತಾಂತರಿಸುವ ಕುರಿತು ಯುಕೆ ಸರ್ಕಾರಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು.