More

    ಉಳ್ಳಾಲದ ಯುವಕ ಮುಂಬೈಯಲ್ಲಿ ಕೊಲೆ?

    ಉಳ್ಳಾಲ: ಇಲ್ಲಿನ ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಎಂಬುವರಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈಯ ಚರಂಡಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.

    ಮೃತದೇಹದ ಜೇಬಿನಲ್ಲಿ ಚುನಾವಣಾ ಗುರುತಿನ ಚೀಟಿ ಸಿಕ್ಕಿದ್ದು, ಇದರ ಆಧಾರದಲ್ಲಿ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಂದರ ಎಂಬುವರ ಪುತ್ರ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಆ.14ರಂದು ಕಾಣೆಯಾಗಿದ್ದು ಈ ಬಗ್ಗೆ ಮುಂಬೈಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಮೃತದೇಹ ವಸಾ ಪೊಲೀಸ್ ಠಾಣಾ ವ್ಯಾಪ್ತಿಯ ಬೃಹತ್ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಗೆ ಜೀವ ಬೆದರಿಕೆ ಇತ್ತು ಎಂದು ಸ್ನೇಹಿತರಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೊಂದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಮೃತನ ತಾಯಿ ಮಾಲತಿ ಎಂಬುವರು ಉಳ್ಳಾಲ ಮೆಸ್ಕಾಂನಲ್ಲಿ ಸ್ವೀಪರ್ ಆಗಿದ್ದು ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಸುಧೀರ್ ಕುಮಾರ್ ಸಣ್ಣ ಪ್ರಾಯದಲ್ಲೇ ಮುಂಬೈಗೆ ಹೋಗಿದ್ದರಿಂದ ಸ್ಥಳೀಯರಲ್ಲಿ ಹೆಚ್ಚಿನ ಮಾಹಿತಿ ಇಲ್ಲ. ಅಲ್ಲದೆ ಮಾಲತಿಯವರಿಗೆ ಮಗ ಇದ್ದನೆನ್ನುವ ಮಾಹಿತಿಯೂ ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಯಾರಿಗೂ ತಿಳಿದಿರಲಿಲ್ಲ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts