ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿಂದಿ ವಿಭಾಗ ವತಿಯಿಂದ ವಿದ್ಯಾಗಿರಿಯ ಕುವೆಂಪು ಸಭಾಭವನದಲ್ಲಿ ನಡೆದ ‘ಉಮಂಗ್ 2022’ ಅಂತರ್ ಕಾಲೇಜು ಸಾಂಸ್ಕೃತಿಕ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಉಡುಪಿಯ ಪೂರ್ಣಪ್ರಜ್ಞ ಸಂಜೆ ಕಾಲೇಜು ಸಮಗ್ರ ಪ್ರಶಸ್ತಿ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ಕಾಲೇಜಿನ ಹಿಂದಿ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಾನ್ಸನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ಕುರಿಯನ್, ಹಿಂದಿ ವಿಭಾಗ ಮುಖ್ಯಸ್ಥ ಡಾ.ರಾಜೀವ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಖಿಲ್ ಹಾಗೂ ಮುಸ್ತಾಫ ತಂಡದಿಂದ ಪಪೆಟ್ ಶೋ ನಡೆಯಿತು. ಹಿಂದಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕ್ರಿಯೆಟಿವ್ ಸ್ಟೋರಿ ಟೆಲ್ಲಿಂಗ್ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು. ಸ್ಕಿಟ್, ಎಕ್ಸ್ಕ್ಲೂಸಿವ್ ನ್ಯೂಸ್ ರಿಪೋರ್ಟಿಂಗ್, ಫೇಸ್ ಪೇಂಟಿಂಗ್, ಗ್ರೂಪ್ ಡ್ಯಾನ್ಸ್ ಸ್ಪರ್ಧೆಗಳು ನಡೆದವು. ಅಂಕಿತಾ ಮತ್ತು ಕೃತಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಶಿರ್, ಸೌರಭ್ ಶೆಟ್ಟಿ ವಂದಿಸಿದರು.