ಹೆಮ್ಮನಹಳ್ಳಿ ಸಹಕಾರ ಸಂಘಕ್ಕೆ ಉಮೇಶ್ ಅಧ್ಯಕ್ಷ

blank
blank

ಮದ್ದೂರು: ತಾಲೂಕಿನ ಹೆಮ್ಮನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸಿ.ಉಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಚ್.ಎಸ್.ಬಾಲಕೃಷ್ಣ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಬಾಲಕೃಷ್ಣ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಆಯ್ಕೆಯನ್ನು ಚುನಾವಣಾಧಿಕಾರಿ ಆಶಾ ಘೋಷಣೆ ಮಾಡಿದರು.

ಸಂಘದ ಅಧ್ಯಕ್ಷ ಎಸ್.ಸಿ.ಉಮೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗದುಕೊಂಡು ಸಂಘದ ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ ಹಾಗೂ ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಘದ ನಿರ್ದೇಶಕರಾದ ಶಿವಲಿಂಗಯ್ಯ, ಲಕ್ಷ್ಮಣ್, ಅಪ್ಪಾಜಿ, ದುಶ್ಯಂತ್‌ಗೌಡ, ಎಚ್.ಕೆ.ಪ್ರಭಾ, ಲಾವಣ್ಯ, ಅರ್ಪಿತಾ, ಲಕ್ಷ್ಮಮ್ಮ, ಪುಟ್ಟಾಚಾರಿ, ಮುಖಂಡರಾದ ನಾಗೇಶ್, ಶಿವಣ್ಣ, ಜಯಶಂಕರ, ರಾಘು, ರವಿ, ಬಾಬು, ಲೋಕೇಶ್, ಕೃಷ್ಣ, ದಿನೇಶ್, ಉಮೇಶ್ ಇದ್ದರು.

 

Share This Article

ನೀರು, ಸೋಪು ಇಲ್ಲದೆ ಕೊಳಕಾದ ಸ್ವಿಚ್‌ಬೋರ್ಡ್‌ನ್ನು ಹೊಸದರಂತೆ ಮಾಡಲು ಇಲ್ಲಿದೆ ಸೂಪರ್‌ ಟಿಪ್ಸ್‌ | Switchboard

Switchboard: ಸಾಮಾನ್ಯವಾಗಿ ಮನೆಗಳಲ್ಲಿರುವ ವಿದ್ಯುತ್ ಸ್ವಿಚ್‌ಬೋರ್ಡ್‌ಗಳು ದಿನ ಕಳೆದಂತೆ ಕೊಳಕಾಗುತ್ತದೆ. ವಿಶೇಷವಾಗಿ ಅಡುಗೆಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳು ಬಹಳ…

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…