ಭದ್ರಾನಾಲೆಯ ಅನಧಿಕೃತ ಪಂಪ್​ಸೆಟ್ ತೆರವು

blank

ಚನ್ನಗಿರಿ: ಭದ್ರಾ ಬಲದಂಡೆ ನಾಲೆ ಅಚ್ಚುಕಟ್ಟು ಪ್ರದೇಶದಲ್ಲಿ ಭದ್ರಾ ನಾಲಾ ಕಾಲುವೆಗಳಿಗೆ ಅಳವಡಿಸಿದ ಅನಧಿಕೃತ ಪಂಪ್​ಸೆಟ್​ಗಳನ್ನು ಶುಕ್ರವಾರ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಬೆಸ್ಕಾಂ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ತೆರವುಗೊಳಿಸಿ ಜಿಲ್ಲಾಧಿಕಾರಿಗಳ ಆದೇಶದಂತೆ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿತು.

blank

ಈ ವೇಳೆ ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿ, ಭದ್ರಾ ಕಾಲುವೆಯಲ್ಲಿ 2024-25ನೇ ಸಾಲಿನ ಬೇಸಿಗೆ ಹಂಗಾಮಿಗೆ ನೀರನ್ನು ಹರಿಸಲಾಗುತ್ತಿದೆ. ಕಾಲುವೆಗಳಲ್ಲಿ ಅನಧಿಕೃತ ಪಂಪ್​ಸೆಟ್​ಗಳನ್ನು ಅಳವಡಿಸಿ ನೀರೆತ್ತುವುದರಿಂದ ಅಚ್ಚುಕಟ್ಟು ಕೊನೆಯ ಭಾಗದವರಿಗೆ ನೀರು ಹರಿಸುವುದು ಕಷ್ಟಕರವಾಗಿದೆ. ಹೀಗಾಗಿ ಅನಧಿಕೃತ ಪಂಪ್ ಸೆಟ್, ಡಿಸೇಲ್ ಜೆನ್​ಸೆಟ್ ಮತ್ತು ಇತರೆ ಉಪಕರಣಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಅವುಗಳನ್ನು ವಶಕ್ಕೆ ಪಡೆದು ಕ್ರಮ ಜರುಗಿಸಲಾಗುತ್ತದೆ ಎಂದರು.

ಭದ್ರಾನಾಲೆಯಿಂದ ನೀರು ಕೊನೆಯ ಭಾಗದವರೆಗೆ ಹರಿಯಬೇಕು. ಹರಿಯುವ ನೀರಿಗೆ ಅಡ್ಡಲಾಗಿ ಮೋಟಾರ್​ಗಳನ್ನು ಅಳವಡಿಸಿ ನೀರು ಹಾಯಿಸಿದರೆ ಜನರಿಗೆ ಕುಡಿಯಲು ಮತ್ತು ಕೃಷಿಗೆ ನೀರು ಇಲ್ಲದಂತಾಗಿದೆ ಎಂದರು.

ಹಂಚಿನ ಸಿದ್ದಾಪುರ ಗ್ರಾಮದ ಸುರಂಗದ ಬಳಿ ಬೆಳಗ್ಗೆ 9 ಗಂಟೆಗೆ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ತೆರಳಿ ಕಾರ್ಯಾಚರಣೆ ನಡೆಸಿ ರೈತರು ಭದ್ರಾನಾಲೆಗೆ ಅಳವಡಿಸಿದ್ದ ಪಂಪ್​ಸೆಟ್​ಗಳನ್ನು ತೆರವುಗೊಳಿಸಿದರು.

ಕಾರ್ಯಾಚರಣೆಯಲ್ಲಿ ಬೆಸ್ಕಾಂ ಇಂಜಿನಿಯರ್ ಮಂಜನಾಯ್ಕ, ಇಂಜಿನಿಯರ್ ವಿಜಯಕುಮಾರ್, ಸೆಕ್ಷನ್ ಅಧಿಕಾರಿ ಸಂದೀಪ್, ಎಎಸ್​ಐ ಮೈಲಾರಪ್ಪ, ಗ್ರಾಮಲೆಕ್ಕಿಗ ಚಂದ್ರಪ್ಪ, ರಾಜಸ್ವ ನಿರೀಕ್ಷಕ ಶ್ರೀನಿವಾಸ್ ಇದ್ದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…