ದೆಹಲಿ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇದನ್ನೂ ಓದಿ: ಛೋಟಾ ರಾಜನ್ ಇನ್ನೂ ಸತ್ತಿಲ್ಲ, ಬದುಕಿದ್ದಾನೆ ಎಂದ ದೆಹಲಿ ಏಮ್ಸ್ ವೈದ್ಯರು!
ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್ನಲ್ಲಿ ಕರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.
ಭೂಗತ ಪಾತಕಿ ಛೋಟಾ ರಾಜನ್ಗೆ ಕರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು
2015 ರಲ್ಲಿ ಇಂಡೋನೇಷ್ಯಾದ ಬಾಲಿ ಎಂಬಲ್ಲಿ 61 ವರ್ಷದ ರಾಜನ್ ಬಂಧನವಾಗಿತ್ತು. ನಂತರ ಭದ್ರತೆಯೊಂದಿಗೆ ದೆಹಲಿ ತಿಹಾರ್ ಜೈಲಿನಲ್ಲಿ ಇಡಲಾಗಿತ್ತು.
ಈತನ ಮೇಲೆ ಮುಂಬೈನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 2011 ರ ಪತ್ರಕರ್ತ ಜೋತಿರ್ಮೊ ದೇ ಹತ್ಯೆ ಪ್ರಕರಣದ ಅಪರಾಧಿಯಾಗಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. (ಏಜೆನ್ಸೀಸ್)