More

    ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು; ವಿಷಪ್ರಾಶನ ಶಂಕೆ

    ನವದೆಹಲಿ: ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    ತೀವ್ರ ಸ್ವರೂಪದ ಖಾಯಿಲೆಯಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ.

    ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪೈಕಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ .

    ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts