ಕಾಸರಗೋಡು: ಮಂಜೇಶ್ವರ ಅಬಕಾರಿ ಇಲಾಖಾ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ರಸ್ತೆ ಸಾರಿಗೆ ನಿಗಮದ ಬಸ್ಸಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ 30 ಲಕ್ಷ ರೂ.ವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸಹರಾ ನಿವಾಸಿ ಹಾಗೂ ಮಂಜೇರಿಯ ಚಿನ್ನದಂಗಡಿ ಕಾರ್ಮಿಕ ಯಶೋದೀಪ್ ಶರದ್ ಬಾಬಡೆ(22)ಎಂಬಾತನನ್ನು ಬಂಧಿಸಲಾಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಬಸ್ನಲ್ಲಿ ಅಬಕಾರಿ ಇನ್ಸ್ಪೆಕ್ಟರ್ ಸಜಿತ್ ಕೆ.ಎಸ್ ನೇತೃತ್ವದಲ್ಲಿ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. 500 ರೂ. ಮೌಲ್ಯದ ನೋಟುಗಳನ್ನೊಳಗೊಂಡ 21 ಲಕ್ಷ ರೂ. ಹಾಗೂ 2 ಸಾವಿರ ರೂ. ಮೌಲ್ಯದ ನೋಟುಗಳನ್ನೊಳಗೊಂಡ 9 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಹಣವನ್ನು ಮಂಜೇಶ್ವರ ಠಾಣೆ ಪೊಲೀಸರಿಗೊಪ್ಪಿಸಲಾಗಿದ್ದು, ಆದಾಯ ತೆರಿಗೆ ಹಾಗೂ ಎನ್ಫೋರ್ಸ್ಮೆಂಟ್ ಅಧಿಕಾರಿಗಳು ತನಿಖೆ ಮುಂದುವರಿಸಲಿದ್ದಾರೆ ಎಂದು ಅಬಕಾರಿ ದಳ ಅಧಿಕಾರಿಗಳು ತಿಳಿಸಿದ್ದಾರೆ.