ಬೆಂಗಳೂರು: ಬಜೆಟ್ನಲ್ಲಿ ಜಲ ಜೀವನ್ ಮಿಷನ್ಗೆ 2020-21ರ ಸಾಲಿಗೆ 11, 500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ನಡೆದ ಜಲ ಜೀವನ್ ಮಿಷನ್ ಕಾರ್ಯಕ್ರಮದಲ್ಲಿ ಪ್ರತಿ ಮನೆಗೆಗೂ ಶುದ್ಧ ಕುಡಿಯುವ ನೀರು ಒದಗಿಸುವುದಾಗಿ ಘೋಷಣೆ ಮಾಡಿದ್ದರು. ಘೋಷಣೆಯನ್ನು ಅಧಿಕೃತವಾಗಿ ಜಾರಿಗೆ ತರಲು 2020-21ರ ಸಾಲಿನಲ್ಲಿ ಯೋಜನೆಗೆ 11,500 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ ಎಂದು ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.
ಈ ಯೋಜನೆಗೆ 3.60 ಲಕ್ಷ ಕೋಟಿ ರೂಪಾಯಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ಯೋಜನೆ ಸ್ಥಳೀಯವಾಗಿ ನೀರಿನ ಮೂಲಗಳನ್ನು ಹೆಚ್ಚಿಸಲು ಹಾಗೂ ಜಲ ಮರುಪೂರಣ ಮಾಡಲು ಒತ್ತು ನೀಡುತ್ತದೆ. ಈ ವರ್ಷ ಒಂದು ದಶ ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳನ್ನು ಆಯ್ಕೆ ಮಾಡಿಕೊಂಡು ಯೋಜನೆ ಜಾರಿಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. (ಏಜೆನ್ಸೀಸ್)