More

    ದೆಹಲಿಯ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿದೆ; ಕೇಂದ್ರ ಬಜೆಟ್​ ವಿರುದ್ಧ ಸಿಎಂ ಅರವಿಂದ ಕೇಜ್ರಿವಾಲ್​ ಅಸಮಾಧಾನ

    ನವದೆಹಲಿ: ಕೇಂದ್ರ ಬಜೆಟ್​ ಮಂಡನೆಯಾದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇಂದು ಮಂಡನೆಯಾದ ಬಜೆಟ್​ನಲ್ಲಿ ದೆಹಲಿ ಬಗ್ಗೆ ಮಲತಾಯಿ ಧೋರಣೆ ತೋರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಆದ್ಯತೆಗಳ ಪಟ್ಟಿಯಲ್ಲಿ ದೆಹಲಿ ಇಲ್ಲ ಎಂದಮೇಲೆ ಜನರು ಯಾಕೆ ಅವರಿಗೆ ಮತ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ.

    ಪ್ರಸಕ್ತ ಕೇಂದ್ರ ಬಜೆಟ್​ ಬಗ್ಗೆ ದೆಹಲಿ ಬಹು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಮತ್ತೊಮ್ಮೆ ನಮ್ಮತ್ತ ಮಲತಾಯಿ ಧೋರಣೆ ತೋರಿಸಲಾಗಿದೆ ಎಂದು ಹೇಳಿದ್ದಾರೆ.

    ಚುನಾವಣೆ ಪೂರ್ವದಲ್ಲಿಯೇ ದೆಹಲಿ ಜನರಿಗೆ ನಿರಾಸೆ ಮೂಡಿಸಿದ ಕೇಂದ್ರ ಸರ್ಕಾರ ಚುನಾವಣೆ ನಂತರ ತನ್ನ ಭರವಸೆಗಳನ್ನು ಈಡೇರಿಸುತ್ತದೆಯೇ ಎಂದು ಟೀಕಾತ್ಮಕವಾಗಿ ಪ್ರಶ್ನಿಸಿದ್ದಾರೆ.(ಪಿಟಿಐ)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts