ನವದೆಹಲಿ: ಮಹಾಮಾರಿ ಕರೊನಾದಿಂದ ಕಂಗೆಟ್ಟಿದ್ದ ಆರ್ಥಿಕತೆಯ ಚೇತರಿಕೆಗೆ ಒಳಗೊಂಡ ಅಂಶವನ್ನೇ ಕೇಂದ್ರವಾಗಿಸಿಕೊಂಡ 2021-22ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ದೇಶದ 4 ರಾಜ್ಯಗಳಿಗೆ ಮಾತ್ರ ಬಂಪರ್ ಆಫರ್ ಸಿಕ್ಕಿದೆ.
ಈ ವರ್ಷ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡ ಕೇಂದ್ರ ಸರ್ಕಾರ, ಈ ನಾಲ್ಕೂ ರಾಜ್ಯಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಪ್ರಕಟಿಸಿದೆ. ಇದನ್ನೂ ಓದಿರಿ ಕೇಂದ್ರ ಬಜೆಟ್| ಜನ ಸಾಮಾನ್ಯರಿಗೆ ಯಾವುದು ಅಗ್ಗ? ಯಾವುದು ದುಬಾರಿ?
2022ರೊಳಗಾಗಿ 8,500 ಕಿ.ಮೀ ಹೆದ್ದಾರಿ ನಿರ್ಮಾಣ ಯೋಜನೆ ಗುರಿ ಹೊಂದಿರುವುದಾಗಿ ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.
- ತಮಿಳುನಾಡಿನಲ್ಲಿ 3,500 ಕಿ.ಮೀ. ದೂರ ರಾಷ್ಟ್ರೀಯ ಹೆದ್ದಾರಿ ಯೋಜನೆ- 1 ಲಕ್ಷ ಕೋಟಿ ರೂ. ಅನುದಾನ
- ಚೆನ್ನೈನಲ್ಲಿ ಹೊರ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 63,246 ಕೋಟಿ ಹಣ
- ಕೇರಳದಲ್ಲಿ 1,100 ಕಿ.ಮೀ. ಹೊಸ ಹೆದ್ದಾರಿ ಯೋಜನೆ, ಮೂಲಸೌಕರ್ಯಕ್ಕೆ 65 ಸಾವಿರ ಕೋಟಿ ರೂ. ವೆಚ್ಚ
- ಪಶ್ಚಿಮ ಬಂಗಾಳದಲ್ಲಿ 675 ಕಿ.ಮೀ. ಹೊಸ ಹೆದ್ದಾರಿ ನಿರ್ಮಾಣ, 25 ಸಾವಿರ ಕೋಟಿ ರೂ. ಅನುದಾನ
- ಅಸ್ಸಾಂನಲ್ಲಿ 1,300 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 3,400 ಕೋಟಿ ರೂ. ಅನುದಾನ
ರಸ್ತೆ ಅಭಿವೃದ್ಧಿಯಲ್ಲದೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಚಹಾ ವ್ಯಾಪಾರಿಗಳಿಗೆ ಬಜೆಟ್ನಲ್ಲಿ 1,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಎರಡೂ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಯೋಜನೆ ಜಾರಿ ಮಾಡುವ ಬಗ್ಗೆ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!
ಮಾಜಿ ಸಿಎಂ ದಿ. ಧರ್ಮಸಿಂಗ್ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು
ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ