ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮನ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕೋರ್ಟ್ ವೃತ್ತದಲ್ಲಿ ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಮಹಾದಾಯಿ ವಿಷಯ ಪ್ರಸ್ತಾಪ ಮಾಡದೆ ಪೌರತ್ವ ಕಾಯ್ದೆ ಜಾರಿ ಪರ ಮಾತನಾಡಲು ಆಗಮಿಸುತ್ತಿರುವ ಅಮಿತ್ ಷಾ ಗೋಬ್ಯಾಕ್ ಎಂದು ಘೋಷಣೆ ಕೂಗಿದರು.
ಪೊಲೀಸರು ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು. ಮನವಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅಂದಾಜು 50 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಜನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. (ದಿಗ್ವಿಜಯ ನ್ಯೂಸ್)