ಚಾಮರಾಜನಗರ: ಬಿರುಬಿಸಿಲನ್ನು ಲೆಕ್ಕಿಸದ ನೆರೆದಿರುವ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿಗೆ ಬಡತನ ಗೊತ್ತಿದೆಯೆ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ
ಮೈಸೂರಿನಿಂದ ಹೆಲಿಕಾಪ್ಟರ್ನಲ್ಲಿ ಗುಂಡ್ಲುಪೇಟೆಗೆ ಆಗಮಿಸಿದ ಅಮಿತ್ ಶಾ, ಕಾರ್ಯಕರ್ತರ ಬಳಿಗೆ ಆಗಮಿಸಿ ನಂತರ ತೆರೆದ ವಾಹನ ಏರಿ ರೋಡ್ ಶೋ ಆರಂಭಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸಿ.ಎಸ್.ನಿರಂಜನ್ ಕುಮಾರ್ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಬಿಎಸ್ಪಿ ಪಕ್ಷದಿಂದ ಅಖಂಡ ಶ್ರೀನಿವಾಸ್ ಸ್ಪರ್ಧೆ!
ಗೃಹ ಸಚಿವ ಅಮಿತ್ ಶಾ ರೋಡ್ ಶೋ ಆರಂಭಕ್ಕೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್ ಸಾಥ್ ನೀಡಿದರು.