More

    ಡಾ. ವೀರೇಂದ್ರ ಹೆಗ್ಗಡೆಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

    ಹುಬ್ಬಳ್ಳಿ: ರಾಜ್ಯಸಭೆಗೆ ನಾಮ ನಿರ್ದೇಶಿತರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಸಂಸತ್ತಿನ ತಮ್ಮ ಕಚೇರಿಯಲ್ಲಿ ಗುರುವಾರ ಹೂ ಗುಚ್ಚ ನೀಡಿ, ಅಭಿನಂದಿಸಿದರು.
    ಸಮಾಜ ಸೇವೆ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕಾಗಿ ಪ್ರಧಾನಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಅವರು, ಇದು ಕರ್ನಾಟಕ ರಾಜ್ಯದ ಸಮಸ್ತ ಜನತೆಗೆ ಸಂದ ಗೌರವ ಎಂದಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದ ಧರ್ವಧಿಕಾರಿಯಾಗಿ ಮಾತ್ರವಲ್ಲದೆ, ಗ್ರಾಮೀಣ ಅಭಿವೃದ್ಧಿ, ದೇಗುಲಗಳ ಪುನರುತ್ಥಾನ, ಪರಿಸರ ಸಂರಕ್ಷಣೆ, ಆರ್ಥಿಕ ದುರ್ಬಲರಿಗೆ ವಿವಿಧ ರೀತಿಯ ನೆರವು ನೀಡುವ ಮೂಲಕ ಸಾರ್ಥಕ ಸಮಾಜ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕಕ್ಕೂ ಅವರ ಸೇವೆ ಬಹಳ ದೊಡ್ಡದಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts