ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಪಿ.ಬಿ. ರೋಡ ಸದ್ಗುರು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ (ಹೊಸಮಠ) ನೂತನ ಶಿಲಾ ಕಟ್ಟಡದ ಕಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು.
ದೇಗುಲದ ಪಾಯ ಕೆಲಸಕ್ಕೆ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಹಾಗೂ ದೇವಸ್ಥಾನ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು ಪೂಜೆ ಮಾಡುವುದರೊಂದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿ ಸದಸ್ಯರು, ಶ್ರೀ ಸಿದ್ದೇಶ್ವರ ಸೇವಾ ಸಮಿತಿ ಸದಸ್ಯರು, ಉಣಕಲ್ ಗ್ರಾಮದ ಹಿರಿಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.