ಉತ್ತರಪ್ರದೇಶ ಬಸ್​ಗೆ ಬೆಂಕಿ; 21 ಪ್ರಯಾಣಿಕರು ಪಾರು, ಉಳಿದವರ ಬಗ್ಗೆ ಇನ್ನು ಸಿಗಬೇಕಿದೆ ಮಾಹಿತಿ

ಲಖನೌ: ಉತ್ತರ ಪ್ರದೇಶದ ಕನ್ನೌಜ್​ ಜಿಲ್ಲೆಯ ಘಿನೊಐ ಎಂಬ ಗ್ರಾಮದ ಬಳಿ ಲಾರಿ ಡಿಕ್ಕಿಯಿಂದ ಬೆಂಕಿ ಹೊತ್ತಿಕೊಂಡ ಬಸ್​ನಿಂದ 21 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ರಾತ್ರಿ ಅಂದಾಜು 9.30ಕ್ಕೆ ಅವಘಡ ನಡೆದಿತ್ತು. ಈ ಬಸ್​ನಲ್ಲಿ 43 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಅದರಲ್ಲಿ 21 ಮಂದಿ ಬೆಂಕಿ ಹೊತ್ತಿದ ಮೇಲೆ ತಪ್ಪಿಸಿಕೊಂಡಿದ್ದಾರೆ. ಇವರೆಲ್ಲ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಬೆಂಕಿ ತಹಬದಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್​ ತಿಳಿಸಿದ್ದಾರೆ. ಇನ್ನು ಕೆಲವು ಪ್ರಯಾಣಿಕರು ಬಸ್​ನಿಂದ ತಪ್ಪಿಸಿಕೊಳ್ಳಲು … Continue reading ಉತ್ತರಪ್ರದೇಶ ಬಸ್​ಗೆ ಬೆಂಕಿ; 21 ಪ್ರಯಾಣಿಕರು ಪಾರು, ಉಳಿದವರ ಬಗ್ಗೆ ಇನ್ನು ಸಿಗಬೇಕಿದೆ ಮಾಹಿತಿ