More

    ‘ರಕ್ಷಾ ಬಂಧನ’: ಯುಪಿ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯೋಗಿ

    ಲಖನೌ: ಕಳೆದ ವರ್ಷದಂತೆ ಈ ವರ್ಷವು ಕೂಡ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಕ್ಷಾಬಂಧನ ಪ್ರಯುಕ್ತ ಆ ರಾಜ್ಯದ ಎಲ್ಲಾ ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.

    ಆಗಸ್ಟ್ 22 ರಂದು ಆಚರಿಸುವ ರಕ್ಷಾಬಂಧನ ಎನ್ನುವುದು ಸಹೋದರ-ಸಹೋದರಿಯರ ಭಾಂದವ್ಯದ ಹಬ್ಬ. ಈ ದಿನ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (upsrtc) ಯಾವುದೇ ಬಸ್‌ಗಳಲ್ಲಿ ಆ ರಾಜ್ಯದ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ. ಈ ಕೊಡುಗೆ ಆ. 21ರ ಮಧ್ಯರಾತ್ರಿಯಿಂದ 22ರ ಮಧ್ಯರಾತ್ರಿಯವರೆಗೆ ಇರಲಿದೆ. ಉಚಿತ ಪ್ರಯಾಣದ ವೇಳೆ ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಕರೊನಾ ಮಹಾಮಾರಿ 3ನೇ ರೂಪ ತೋರುತ್ತಿದ್ದು, ಈ ಕಾರಣದಿಂದಾಗಿ ಯಾರೂ ಕೂಡ ಅದ್ದೂರಿಯಾಗಿ ಸಂಭ್ರಮಾಚರಣೆ ಮಾಡುವ ಬದಲು ಮನೆಯಲ್ಲಿಯೇ ಸರಳವಾಗಿ ಆಚರಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.(ಏಜೆನ್ಸೀಸ್)

    ಏರ್​ಲಿಫ್ಟ್ ಮೂಲಕ ಅಫ್ಘಾನ್​​ನಿಂದ ಭಾರತಕ್ಕೆ ಬಂದ ‘ಸ್ನೈಫರ್ ಡಾಗ್ಸ್’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts