ಲಖನೌ: ಹಗಲು-ರಾತ್ರಿಯೆನ್ನದೆ ಕಷ್ಟಪಟ್ಟು ದುಡಿದು ಪತ್ನಿಯನ್ನು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಮಾಡಿರುವುದಾಗಿ ಹೇಳಿಕೆ ನೀಡಿದ್ದಲ್ಲದೆ, ಪತ್ನಿಯ ವಿರುದ್ಧ ದಾಂಪತ್ಯ ದ್ರೋಹ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಎಸ್ಡಿಎಂ ಕೊನೆಗೂ ಮೌನ ಮುರಿದಿದ್ದಾರೆ.
ಗಂಡ ಹ್ಯಾಕ್ ಮಾಡಿದ್ದಾನೆ
ಈ ಪ್ರಕರಣದ ತಾಜಾ ಬೆಳವಣಿಗೆಯಲ್ಲಿ ಆರೋಪಿತ ಅಧಿಕಾರಿ ಜ್ಯೋತಿ, ತನ್ನ ಗಂಡನಿಂದ ಡಿವೋರ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತನ್ನ ಮೊಬೈಲ್ ಫೋನ್ ಅನ್ನು ಗಂಡ ಹ್ಯಾಕ್ ಮಾಡಿದ್ದಾನೆ ಎಂದು ಆರೋಪ ಮಾಡಿರುವ ಜ್ಯೋತಿ, ದಾಂಪತ್ಯ ದ್ರೋಹದ ಕುರಿತು ಸುಳ್ಳು ಸಾಕ್ಷಿಗಳನ್ನು ರಚಿಸಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ: ಹುಡುಗರು ಸೊಂಟದ ಮೇಲೆ ಕೈ ಇಟ್ಟರೆ, ದೂರು ನೀಡುವ ಬದಲು ಎಂಜಾಯ್ ಮಾಡಿ: ನಟಿ ರೇಖಾ ನಾಯರ್ ವಿವಾದ
ಮದುವೆಗು ಮುನ್ನ ತನ್ನನ್ನು ತಾನು ಗ್ರಾಮ ಪಂಚಾಯಿತಿ ಅಧಿಕಾರಿ ಎಂದು ಪರಿಚಯಿಸಿಕೊಂಡ. ಆದರೆ, ಆತ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಸ ಗುಡಿಸುವ ವರ್ಗ-4ರ ಉದ್ಯೋಗಿ ಆಗಿದ್ದಾರೆ. ಅಂದಹಾಗೆ ಅಲೋಕ್ ಮೌರ್ಯ ಮತ್ತು ಜ್ಯೋತಿಗೆ 2010ರಲ್ಲಿ ಮದುವೆ ಆಯಿತು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮದುವೆ ಸಮಯದಲ್ಲಿ ಜ್ಯೋತಿ ಪದವಿ ಓದುತ್ತಿದ್ದರು. ಪ್ರಯಾಗ್ರಾಜ್ನಲ್ಲಿ ಉತ್ತರ ಪ್ರದೇಶ ನಾಗರಿಕ ಸೇವಾ ಆಯೋಗ (ಯುಪಿಪಿಎಸ್ಸಿ) ನಡೆಸುವ ಪರೀಕ್ಷೆಗೆ ಸಿದ್ಧತೆ ನಡೆಸಲು ಅಲೋಕ್ ಮತ್ತು ಆತನ ಪಾಲಕರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣವಾಗುವವರೆಗೂ ಹಣಕಾಸು ನೆರವು ನೀಡಿದ್ದೇವೆ ಎಂದು ಅಲೋಕ್ ತಿಳಿಸಿದ್ದಾರೆ.
ಸ್ವೀಪರ್ ಎಂಬುದು ಸಮಸ್ಯೆಯಲ್ಲ
ಇದೀಗ ಸಂದರ್ಶನವೊಂದರಲ್ಲಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಜ್ಯೋತಿ ಮೌರ್ಯ, ಈ ಪ್ರಕರಣ ಗಂಡ-ಹೆಂಡತಿ ನಡುವಿನ ವಿವಾದ ಹೊರತು, ಎಸ್ಡಿಎಂ, ಸ್ವೀಪರ್ ನಡುವೆ ಜಟಾಪಟಿ ಅಲ್ಲ. ಅವರು ಸ್ವೀಪರ್ ಎಂಬುದು ನನಗೆ ಸಮಸ್ಯೆಯೇ ಅಲ್ಲ ಎಂದು ಹೇಳಿದ ಜ್ಯೋತಿ, ಭ್ರಷ್ಟಾಚಾರ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಇದು ನನ್ನ ವೈಯಕ್ತಿಕ ವಿಚಾರ
ಮುಂದಿನ ನಡೆ ಏನು ಎಂಬುದಕ್ಕೆ ಪ್ರತಿಕ್ರಿಯಿಸಿದ ಜ್ಯೋತಿ, ಸದ್ಯ ನನ್ನ ಪ್ರಕರಣ ಕೋರ್ಟಿನಲ್ಲಿದೆ. ನನ್ನ ಹೇಳಿಕೆಯನ್ನು ನಾನು ಕೋರ್ಟಿನಲ್ಲಿ ತಿಳಿಸುತ್ತೇನೆ ಎಂದರು. ಇದೇ ವೇಳೆ ಹೋಮ್ ಗಾರ್ಡ್ ಕಮಾಂಡೆಂಟ್ ಮನೀಶ್ ದುಬೆ ಜತೆಗಿನ ಸಂಬಂಧದ ಬಗ್ಗೆ ಮಾತನಾಡಿದ ಜ್ಯೋತಿ ಮೌರ್ಯ, ಇದು ನನ್ನ ವೈಯಕ್ತಿಕ ವಿಚಾರ ಎಂದು ಮತ್ತೆ ಒತ್ತಿ ಹೇಳಿದರು.
ಇದನ್ನೂ ಓದಿ: ಮನುಷ್ಯರಷ್ಟೇ ಅಲ್ಲ, ಪಕ್ಷಿಗಳಿಂದಲೂ ತಮ್ಮ ಸಂಗಾತಿಗೆ ವಿಚ್ಛೇದನ: ಆಘಾತಕಾರಿ ಅಂಶ ಪತ್ತೆ
ಮಾಧ್ಯಮಗಳಿಗೆ ತರಾಟೆ
ಇದೇ ಸಂದರ್ಭದಲ್ಲಿ ಮಾಧ್ಯಮದವರ ವಿರುದ್ಧ ಹರಿಹಾಯ್ದ ಜ್ಯೋತಿ ಮೌರ್ಯ, ಇನ್ನೊಬ್ಬರ ಮನೆಗಳನ್ನು ಪ್ರವೇಶಿಸುವ ಮೂಲಕ ನೀವು ಏನನ್ನು ನೋಡಲು ಬಯಸುತ್ತೀರಿ? ಗಂಡ ಮತ್ತು ಹೆಂಡತಿ ಹೇಗೆ ಬದುಕುತ್ತಾರೆ ಎಂಬ ಆಸಕ್ತಿ ನಿಮಗೇಕೆ? ಸಂಬಂಧ ಹದಗೆಟ್ಟಾಗ, ಆ ವಿಷಯ ನ್ಯಾಯಾಲಯದ ಮೆಟ್ಟಿಲೇರಿತ್ತದೆ ಮತ್ತು ಅಲ್ಲಿಯೇ ತೀರ್ಮಾನವಾಗುತ್ತದೆ ಎಂದರು.
ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪದ ಜತೆಗೆ ಆಕೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾಳೆ ಎಂಬ ಆಪಾದನೆಯನ್ನು ಅಲೋಕ್ ಮೌರ್ಯ ಮಾಡಿದ್ದ. ಅಲ್ಲದೆ, ನನ್ನನ್ನು ಕೊಲ್ಲಲು ಮನೀಶ್ ಸಂಚು ರೂಪಿಸಿದ್ದಾರೆ ಎಂಬ ಆರೋಪವನ್ನು ಅಲೋಕ್ ಮಾಡಿದ್ದಾರೆ.
ಘಟನೆ ಹಿನ್ನೆಲೆ ಏನು?
ಜ್ಯೋತಿ ಮೌರ್ಯ ಮತ್ತು ಅಲೋಕ್ 2010ರಲ್ಲಿ ಮದುವೆ ಆದರು. ಆ ಸಮಯದಲ್ಲಿ ಅಲೋಕ್ ಪಂಚಾಯತ್ ರಾಜ್ ಇಲಾಖೆಯಲ್ಲಿ 4ನೇ ವರ್ಗದ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಇದರ ನಡುವೆ ಜ್ಯೋತಿ ಓದು ಮುಂದುವರಿಸುವ ಬಯಕೆಯನ್ನು ಗಂಡನ ಬಳಿ ವ್ಯಕ್ತಪಡಿಸಿದ್ದರು. ಬಳಿಕ ಅಲೋಕ್ ಕೂಡ ಇದಕ್ಕೆ ಓಕೆ ಎಂದಿದ್ದರು. ಮದುವೆ ಬಳಿಕ ಇಬ್ಬರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದೆವು. ಆದರೆ, ನಾನು ಬಿಡುವಿಲ್ಲದೆ, ತುಂಬಾ ಶ್ರಮವಹಿಸಿ ದುಡಿದು ಪತ್ನಿಗೆ ಶಿಕ್ಷಣ ಕೊಡಿಸಿದೆ. ಪ್ರಯಾಗ್ರಾಜ್ನಲ್ಲಿರುವ ಒಳ್ಳೆಯ ಕೋಚಿಂಗ್ ಕೇಂದ್ರಕ್ಕೆ ದಾಖಲಿಸಿದೆ. ತನ್ನ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ 2016ರಲ್ಲಿ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಆಗಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಳು. ಯಶಸ್ಸನ್ನು ತಲೆಗೆ ತುಂಬಿಸಿಕೊಂಡ ಪತ್ನಿ ನನಗೆ ವಂಚನೆ ಮಾಡಲು ಮುಂದಾದಳು ಎಂದು ಅಲೋಕ್ ಆರೋಪಿಸಿದ್ದಾರೆ.
ಅಲೋಕ್ ಕಣ್ಣೀರು
2023ರ ಮೇ 7ರಂದು ತನ್ನ ಮಾವ ಮತ್ತು ಗಂಡನ ವಿರುದ್ಧ ಜ್ಯೋತಿ ಮೌರ್ಯ ವರದಕ್ಷಿಣೆ ಕಿರುಕುಳ ದಾಖಲಿಸಿದರು. ಫಾರ್ಚೂನರ್ ಕಾರು ಮತ್ತು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಜ್ಯೋತಿ ಉಲ್ಲೇಖಿಸಿದ್ದರು. ಅಲ್ಲದೆ, ಗಂಡನನ್ನು ಜೈಲಿಗೆ ಕಳುಹಿಸಿದ್ದು, ಇದೀಗ ಅಲೋಕ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಮತ್ತು ತನ್ನ ಕೆಲಸವನ್ನು ಕಳೆದುಕೊಂಡಿದ್ದಾರೆ. ಇದರಿಂದ ಸಂಕಷ್ಟಕ್ಕಿಡಾಗಿದ್ದು, ಮಾಧ್ಯಮಗಳ ಮುಂದೆ ಅಲೋಕ್ ಕಣ್ಣೀರಿಟ್ಟಿದ್ದಾರೆ.
ಇದನ್ನೂ ಓದಿ: ಚಿರತೆ ದಾಳಿಯಿಂದ ರಕ್ಷಿಸಲು ಹೊಸ ಉಪಾಯ ಸಾಕಿರುವ ಕುರಿಗಳ ಕತ್ತಿಗೆ ಕಬ್ಬಿಣದ ತಗಡಿನ ಪಟ್ಟಿ ಕಟ್ಟಿದ ರೈತ
ಸರಸ ಸಲ್ಲಾಪದಲ್ಲಿ ತೊಗಿದ್ದಳು
ಇದೀಗ ಅಲೋಕ್ ಮೌರ್ಯ ಕೂಡ ತನ್ನ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ. ಗಾಜಿಯಾಬಾದ್ನಲ್ಲಿರುವ ರಾಷ್ಟ್ರೀಯ ಕಾವಲು ಪಡೆಯ ಕಮಾಂಡರ್ ಮನೀಶ್ ದುಬೆ ಎಂಬುವರ ಜತೆ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ. ಜ್ಯೋತಿ ತನ್ನ ಅಧಿಕೃತ ನಿವಾಸದಲ್ಲಿ ಮನೀಶ್ ಜೊತೆ ಸರಸ ಸಲ್ಲಾಪದಲ್ಲಿ ತೊಗಿದ್ದಳು. ಇದನ್ನು ನಾನು ಕಣ್ಣಾರೆ ಕಂಡೆ ಎಂದು ದೂರಿದ್ದಾರೆ. ನನಗೆ ಜ್ಯೋತಿ ಕಡೆಯಿಂದ ಜೀವಕ್ಕೆ ಬೆದರಿಕೆ ಇದೆ. ಡಿವೋರ್ಸ್ ಕೊಡದಿದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಲೋಕ್, ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಸಂಬಂಧ ಸದ್ಯ ತನಿಖೆ ನಡೆಯುತ್ತಿದೆ. (ಏಜೆನ್ಸೀಸ್)
ಹಗಲು-ರಾತ್ರಿ ದುಡಿದು ಪತ್ನಿಯ ಓದಿಗೆ ನೆರವು: ಸರ್ಕಾರಿ ಕೆಲಸ ಸಿಗುತ್ತಿದ್ದಂತೆ ಗಂಡನಿಗೆ ಬಿಗ್ ಶಾಕ್!
ಗಂಡನ ದುಡಿಮೆಯಲ್ಲಿ ಸರ್ಕಾರಿ ಕೆಲ್ಸ ಗಿಟ್ಟಿಸಿ ಅಕ್ರಮ ಸಂಬಂಧದಲ್ಲಿ ಸಿಕ್ಕಿಬಿದ್ದ ಮಹಿಳಾಧಿಕಾರಿಯ ಹಳೇ ಹೇಳಿಕೆ ವೈರಲ್!
ಗಂಡನ ದುಡಿಮೆಯಲ್ಲಿ ಸರ್ಕಾರಿ ಕೆಲ್ಸ, ಬಾಯ್ಫ್ರೆಂಡ್ ಜತೆ ಸರಸ: ಮಹಿಳಾಧಿಕಾರಿಯ ವಾಟ್ಸ್ಆ್ಯಪ್ ಚಾಟ್ ವೈರಲ್