ಮುಜಾಫರ್ನಗರ: ಪ್ರೀತಿಯ ಮಡದಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ವ್ಯಕ್ತಿಯೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲಿಯಲ್ಲಿ ನಡೆದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಬಾಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸೊಂಟಾ ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬಲೆಂದರ್ ಸಿಂಗ್ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಬೇಸತ್ತು ಮಕ್ಕಳನ್ನು ಕರೆದುಕೊಂಡು ಮಡದಿ ತವರು ಮನೆಗೆ ತೆರಳಿದ್ದಳು.
ಪತ್ನಿ ಹೋದಳಲ್ಲ ಎಂಬ ದುಃಖದಲ್ಲಿ ದೇಶಿ ನಿರ್ಮಿತ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. (ಏಜೆನ್ಸೀಸ್)
ಪಿಎಂಸಿ ಬ್ಯಾಂಕ್ ಹಗರಣದ ಆರೋಪಿ ರಾಕೇಶ್ಗೆ ಕೋವಿಡ್ ದೃಢ; ಸಂಬಂಧಿಕರು ಗದ್ದಲ ಸೃಷ್ಟಿಸಿದ್ದೇಕೆ?