More

    ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಬಳಿ ಕ್ಷಮೆ ಯಾಚಿಸಿದ ಉತ್ತರ ಪ್ರದೇಶ ಪೊಲೀಸರು

    ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಹಾಥರಸ್​ಗೆ ಹೋದಾಗ ಅವರನ್ನು ಪೊಲೀಸರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ.

    ಮೊದಲ ದಿನ ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಹಾಥರಸ್​ಗೆ ತೆರಳಿದ್ದಾಗ ನಡೆದ ನೂಕುನುಗ್ಗಲು, ಪೊಲೀಸರ ಲಾಠಿ ಚಾರ್ಜ್​ ವೇಳೆ ರಾಹುಲ್​ ಗಾಂಧಿಯವರು ಪೊದೆಗೆ ಬಿದ್ದಿದ್ದರು. ಆದರೂ ಬೆಂಬಿಡದೆ ಎರಡನೇ ಬಾರಿ ಭೇಟಿಗೆ ತೆರಳಿದ ಸಂದರ್ಭದಲ್ಲಿ ಪುರುಷ ಅಧಿಕಾರಿಯೋರ್ವ ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಹಿಡಿದು ಎಳೆದಿದ್ದಾರೆ. ಈ ಫೊಟೋ ಕೂಡ ಎಲ್ಲೆಡೆ ವೈರಲ್ ಆಗಿ, ಪೊಲೀಸರ ಕ್ರಮಕ್ಕೆ ವಿರೋಧವೂ ವ್ಯಕ್ತವಾಗಿದೆ.

    ಇದೀಗ ಉತ್ತರ ಪ್ರದೇಶ ಪೊಲೀಸರು ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಬಳಿ ಕ್ಷಮೆ ಯಾಚಿಸಿದ್ದಾರೆ. ನಿನ್ನೆಯಷ್ಟೇ ಹಾಥರಸ್​ಗೆ ಭೇಟಿ ಕೊಟ್ಟು, ಜಿಲ್ಲಾ ಮ್ಯಾಜಿಸ್ಟ್ರೇಟ್​​ನ್ನು ಅಮಾನತು ಮಾಡಬೇಕು ಎಂದು ಇವರಿಬ್ಬರೂ ಆಗ್ರಹಿಸಿದ್ದರು. ಅದಾದ 24 ಗಂಟೆಯೊಳಗೆ ಅಂದರೆ ಇಂದು ಉತ್ತರ ಪ್ರದೇಶ ಪೊಲೀಸರು ಕ್ಷಮೆ ಕೋರಿದ್ದಾರೆ. ಇದನ್ನೂ ಓದಿ: ರಾಹುಲ್​ ಗಾಂಧಿಗೆ ಮಾಡೋಕೇನೂ ಇಲ್ಲ: ಹರಿಯಾಣ ಸಿಎಂ

    ಅದರಲ್ಲೂ ನಿನ್ನೆ ಪ್ರಿಯಾಂಕಾ ಗಾಂಧಿಯವರ ತೋಳಿಗೆ ಕೈ ಹಾಕಿ, ಬಟ್ಟೆ ಎಳೆದ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ ಎಂದೂ ಹೇಳಿದ್ದಾರೆ. ಈ ಘಟನೆ ಬಗ್ಗೆ ಸುಮೊಟೊ ದಾಖಲಿಸಿಕೊಂಡಿರುವ ಡಿಸಿಪಿ, ತನಿಖೆಗಾಗಿ ಹಿರಿಯ ಮಹಿಳಾ ಪೊಲೀಸ್​ ಅಧಿಕಾರಿಯನ್ನು ನೇಮಿಸಿದ್ದಾರೆ. (ಏಜೆನ್ಸೀಸ್)

    ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್​ ಆರೋಗ್ಯ ತುಸು ಗಂಭೀರ; ಸಭೆ ಮುಂದೂಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts