ಕಾರ್ಮಿಕರಿಗೆ ಧನಸಹಾಯ … ಯಶ್ ನಡೆಗೆ ಚಿತ್ರರಂಗದವರ ಮೆಚ್ಚುಗೆ

blank

ಕಾರ್ಮಿಕರಿಗೆ ಧನಸಹಾಯ ... ಯಶ್ ನಡೆಗೆ ಚಿತ್ರರಂಗದವರ ಮೆಚ್ಚುಗೆ

ಬೆಂಗಳೂರು: ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡ ಚಿತ್ರರಂಗದ ಹಲವು ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ನೆರವಿಗೆ ಇದೀಗ ಯಶ್ ಬಂದಿದ್ದಾರೆ. ಚಿತ್ರರಂಗದ ಸುಮಾರು ಮೂರು ಸಾವಿರ ಕಾರ್ಮಿಕರ ಖಾತೆಗಳಿಗೆ ತಲಾ ಐದು ಸಾವಿರ ರೂ.ಗಳನ್ನು ಹಾಕುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಈ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷ ಸಾ.ರಾ. ಗೋವಿಂದು ಜತೆಗೆ ಯಶ್ ಚರ್ಚಿಸಿದ್ದು, ವಿವರಗಳು ತಲುಪಿದ ತಕ್ಷಣವೇ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಭರವಸೆಯ ಒಂದು ಬೆಳಕು … ಕರೊನಾ ವಾರಿಯರ್ಸ್​ಗೆ ಹಾಡಿನ ಮೂಲಕ ಗೌರವ

ಪ್ರಮುಖವಾಗಿ, ಯಶ್​ ಅವರ ಈ ನಡೆಯನ್ನು ಬಹಳ ಮಹತ್ವದ್ದು ಎಂದು ಉಪೇಂದ್ರ ಬಣ್ಣಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ‘ಧನ್ಯವಾದಗಳು ಯಶ್​. ಇಂತಹ ಮತ್ತಷ್ಟು ಮಹತ್ಕಾರ್ಯಗಳು ತಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ’ ಎಂದು ಮೆಚ್ಚಿಕೊಂಡಿದ್ದಾರೆ.

ಇನ್ನು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಸಹ ಯಶ್​ ಮಾಡುತ್ತಿರುವ ಸಹಾಯ ಶ್ಲಾಘನೀಯ ಎಂದು ಹೇಳಿದ್ದಾರೆ. ಈ ಕುರಿತು ವಿಡಿಯೋ ಮಾಡಿರುವ ಅವರು, ಯಶ್​ಗೆ ಸಮಸ್ತ ಚಿತ್ರರಂಗದ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸೆಕ್ಸ್​ ಸೀನ್​ ಶೂಟಿಂಗೂ ಮುನ್ನ ರಾಧಿಕಾ ಆಪ್ಟೆ ಜತೆ ನಡೆದ ರಹಸ್ಯ ಮಾತುಕತೆ ಬಿಚ್ಚಿಟ್ಟ ನಟ!

ಬರೀ ಉಪೇಂದ್ರ ಮತ್ತು ಸಾ.ರಾ. ಗೋವಿಂದು ಮಾತ್ರವಲ್ಲ, ಎ.ಪಿ. ಅರ್ಜುನ್​, ಪವನ್​ ಒಡೆಯರ್​, ತರುಣ್​ ಸುಧೀರ್​ ಸೇರಿದಂತೆ ಚಿತ್ರರಂಗದ ಹಲವರು, ಕಾರ್ಮಿಕರಿಗೆ 1.5 ಕೋಟಿ ರೂ.ಗಳನ್ನು ಕೊಟ್ಟಿರುವ ಯಶ್​ ನಡೆಯನ್ನು ಸ್ವಾಗತಿಸಿದ್ದಾರೆ.

ಇನ್ನು ಮುಂದೆ ಶಾಲೆಗೆ ಹೋಗಲ್ಲ ಎಂದು ಸೋನಾಕ್ಷಿ ಹಠ ಹಿಡಿದಿದ್ದು ಯಾಕೆ?

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…