ಬೆಂಗಳೂರು: ಕರೊನಾ ಎರಡನೆಯ ಅಲೆಯಿಂದ ಕನ್ನಡ ಚಿತ್ರರಂಗ ಅಕ್ಷರಶಃ ತತ್ತರಿಸಿದೆ. ಮೊದಲ ಅಲೆಯಿಂದ ನಿಧಾನಕ್ಕೆ ಚಿತ್ರರಂಗ ಚೇತರಿಸಿಕೊಳ್ಳುತ್ತಿದೆ ಎನ್ನುವಾಗಲೇ, ಎರಡನೇ ಅಲೆ ಇನ್ನಷ್ಟು ಹೊಡೆತ ನೀಡಿದೆ.
ಇದನ್ನೂ ಓದಿ: ಕತ್ರಿನಾ ಕೈಫ್ ಜತೆ ವಿಜಯ್ ದೇವರಕೊಂಡ ರೊಮ್ಯಾನ್ಸ್
ಹೀಗಿರುವಾಗಲೇ, ಸಂಕಷ್ಟದಲ್ಲಿರುವ ಜನರಿಗೆ ಕನ್ನಡದ ಹಲವು ಸೆಲೆಬ್ರಿಟಿಗಳು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಸುದೀಪ್ ತಮ್ಮ ಕಿಚ್ಚ ಚಾರಿಟಬಲ್ ಟ್ರಸ್ಟ್ನಿಂದ 30 ಆಕ್ಸಿಜನ್ ಸಿಲಿಂಡರ್ಗಳನ್ನು ಕೊಟ್ಟಿದ್ದಾರೆ. ಶ್ರೀಮುರಳಿ ಭಾನುವಾರ ಐದು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಊಟ ವಿತರಿಸಿದ್ದಾರೆ. ರಾಗಿಣಿ, ಸಂಜನಾ ಸೇರಿದಂತೆ ಹಲವರು ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಲೇ ಇದ್ದಾರೆ.
ಈಗ ಉಪೇಂದ್ರ ಸಹ ದೊಡ್ಡ ಮಟ್ಟದಲ್ಲಿ ಸಹಾಯ ಮಾಡುವುದಕ್ಕೆ ಮುಂದಾಗಿದ್ದಾರೆ. ಮೊದಲ ಲಾಕ್ಡೌನ್ ಸಮಯದಲ್ಲಿ ಒಕ್ಕೂಟದ ಎಲ್ಲ ಸಂಘಗಳ ಸದಸ್ಯರುಗಳಿಗೆ ಧನಸಹಾಯ ಮಾಡಿದ್ದ ಉಪೇಂದ್ರ, ಈ ಬಾರಿ ರೇಷನ್ ಕಿಟ್ಗಳನ್ನು ವಿತರಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಅಕೌಂಟ್ನಲ್ಲಿ ಅವರು ಘೋಷಿಸಿದ್ದಾರೆ.
ಇದನ್ನೂ ಓದಿ: ಮಕ್ಕಳ ಶಿಕ್ಷಣಕ್ಕೆ ಕಿಚ್ಚನ ಆಸರೆ; ಚಾಮರಾಜನಗರದಲ್ಲಿ ಮಡಿದ ಕುಟುಂಬಕ್ಕೆ ನೆರಳು
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ ಎಂದು ಉಪೇಂದ್ರ ಹೇಳಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ,
ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ. ನಿಮ್ಮ ಉಪ್ಪಿ.— Upendra (@nimmaupendra) May 10, 2021