ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಟೆಟ್​ನಲ್ಲಿ ಅನುದಾನ ಘೋಷಣೆ: 5,630 ಕೋಟಿ ರೂ. ಮೀಸಲು

ನವದೆಹಲಿ: ಕರ್ನಾಟಕದ ಬೃಹತ್ ನೀರಾವರಿ ಯೋಜನೆಯಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ಅನುದಾನವನ್ನು ಘೋಷಣೆ ಮಾಡಿದೆ. ವಿತ್ತ ಸಚಿವೆಯಾಗಿ ಇಂದು 5ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​​ ಭದ್ರಾ ಮೇಲ್ದಂಡೆ ಯೋಜನೆಗೆ 5,630 ಕೋಟಿ ರೂ. ಅನುದಾನ ಮೀಸಲು ಇಟ್ಟಿರುವುದಾಗಿ ಘೋಷಣೆ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯು ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ ಇದಾಗಿದೆ. ಪ್ರಧಾನಿ … Continue reading ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಟೆಟ್​ನಲ್ಲಿ ಅನುದಾನ ಘೋಷಣೆ: 5,630 ಕೋಟಿ ರೂ. ಮೀಸಲು