ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಮುಂಬೈ ಕಚೇರಿಯನ್ನು ಬೃಹನ್ಮುಂಬೈ ಪಾಲಿಕೆ ಒಡೆದುಹಾಕಿರುವ ವಿಚಾರ ನಿಮಗೆಲ್ಲರಿಗೂ ಗೊತ್ತಿರುವುದೇ. ಇದೀಗ ಯಾವ ಕಾರಣಕ್ಕಾಗಿ ತನ್ನ ಕಚೇರಿಯನ್ನು ಒಡೆಯಲಾಗಿದೆ ಮತ್ತು ಏನು ಮಾಡಿದ್ದರೆ ಕಟ್ಟಡಕ್ಕೆ ಏನೂ ತೊಂದರೆಯಾಗುತ್ತಿರಲಿಲ್ಲ ಎನ್ನುವುದರ ಬಗ್ಗೆ ಕಂಗನಾ ರಣಾವತ್ ಮಾತನಾಡಿದ್ದಾರೆ.
ಇದನ್ನೂ ಓದಿ: ಅಪರಾಧವೇ ಮಾಡದೆ 28 ವರ್ಷ ಜೈಲುವಾಸ ಅನುಭವಿಸಿದ; ಜೈಲಿನಿಂದ ಹೊರಬಂದವನಿಗೆ ಸಿಕ್ಕಿದ್ದು 71 ಕೋಟಿ ರೂಪಾಯಿ!
ನಟಿ ಉರ್ಮಿಳಾ ಮಾತೋಂಡ್ಕರ್ ಅವರು ಇತ್ತೀಚೆಗೆ ಶಿವಸೇನೆ ಪಕ್ಷ ಸೇರಿದ್ದಾರೆ. ಪಕ್ಷ ಸೇರಿದ ಬೆನ್ನಲ್ಲೇ ಅವರು 3 ಕೋಟಿ ರೂಪಾಯಿ ಮೌಲ್ಯದ ಕಚೇರಿಯನ್ನು ಮುಂಬೈನಲ್ಲಿ ಖರೀದಿಸಿದ್ದಾರೆ. ಇದಕ್ಕೆ ಟಾಂಟ್ ನೀಡಿರುವ ಕಂಗನಾ, “ಉರ್ಮಿಳಾ ಜೀ, ನಾನು ಕಷ್ಟ ಪಟ್ಟು ದುಡಿದ ಹಣದಲ್ಲಿ ಖರೀದಿಸಿದ್ದ ಕಚೇರಿಯನ್ನು ಕಾಂಗ್ರೆಸ್ ನಾಶ ಮಾಡಿತು. ಬಿಜೆಪಿ ಮನವೊಲಿಸಲು ಹೋಗಿದ್ದಕ್ಕೆ ನನಗೆ ಸಿಕ್ಕಿದ್ದು, 25-30 ಕೇಸುಗಳು. ನಾನು ಮೂರ್ಖಳಾಗದೆ ನಿಮ್ಮಷ್ಟೇ ಜಾಣೆಯಾಗಿದ್ದರೆ ಕಾಂಗ್ರೆಸ್ಗೆ ಖುಷಿ ಪಡಿಸುತ್ತಿದ್ದೆ. ನಾನದೆಷ್ಟು ಮೂರ್ಖಳು? ” ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಅಂತ್ಯಸಂಸ್ಕಾರ ಮಾಡಲು ಬಂದಿದ್ದವರ ಮೇಲೆ ಕುಸಿದ ಛಾವಣಿ! 18 ಮಂದಿ ದುರ್ಮರಣ
ಇದಕ್ಕೆ ಪ್ರತಿಕ್ರಿಯಿಸಿರುವ ಉರ್ಮಿಳಾ, ತಾನು ಆ ಫ್ಲಾಟ್ನ್ನು 2011ರಲ್ಲಿಯೇ ಖರೀದಿಸಿರುವುದಾಗಿ ಹೇಳಿಕೊಂಡಿದ್ದಾರೆ. ತಾನು ರಾಜಕೀಯಕ್ಕೆ ಬರುವ ಮುನ್ನವೇ ನಟನೆಯಿಂದ ಸಂಪಾದಿಸಿದ ಹಣದಲ್ಲಿ ಫ್ಲಾಟ್ ಖರೀದಿಸಿದ್ದಾಗಿ ಆಕೆ ತಿಳಿಸಿದ್ದಾರೆ. (ಏಜೆನ್ಸೀಸ್)
Dear @UrmilaMatondkar ji maine jo khud ki mehnat se ghar banaye woh bhi Congress tod rahi hai, sach mein BJP ko khush karke mere haath sirf 25-30 cases he lage hain, kash main bhi aapki tarah samajhdar hoti toh Congress ko khush karti, kitni bevakoof hoon main, nahin? pic.twitter.com/AScsUSLTAA
— Kangana Ranaut (@KanganaTeam) January 3, 2021
गणपति बाप्पा मोरया 🙏🏼@KanganaTeam pic.twitter.com/m8mRgbsg6o
— Urmila Matondkar (@UrmilaMatondkar) January 3, 2021
ಸಿವಿಲ್ ಆಸ್ಪತ್ರೆಯಲ್ಲೇ ಮಹಿಳೆಯ ಮರ್ಡರ್! ಪ್ರೀತಿಸಿ ಮೋಸ ಮಾಡಿದವಳ ಜೀವವನ್ನೇ ತೆಗೆದ ಪಾಗಲ್ ಪ್ರೇಮಿ!
ಮಗನ ಹೆಂಡತಿಗೆ ಮಾವ ಹೀಗಾ ಮಾಡೋದು?! ತನಿಖೆಯಲ್ಲಿ ಬಯಲಾಯಿತು ಮಾವನ ನಿಜ ಬಣ್ಣ