More

    ನಾಳೆಯಿಂದ ಪಾಲಿಬೆಟ್ಟದಲ್ಲಿ ಉರುಸ್

    ಸಿದ್ದಾಪುರ: ಇತಿಹಾಸ ಪ್ರಸಿದ್ಧ ಆರ್ಕಾಡ್ ಪಟ್ಟಾಣ್ ಬಾಬಾ ಶಾವಲಿ ಉರುಸ್ ಫೆ.9 ರಿಂದ 12ರವರೆಗೆ ಸರ್ವಧರ್ಮ ಸಮ್ಮೇಳನ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ ಎಂದು ಪಾಲಿಬೆಟ್ಟ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಕೆ. ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ.

    9ರಂದು ಜುಮಾ ನಮಾಜ್ ಬಳಿಕ ಆರ್ಕಾಡ್ ಪಟ್ಟಾಣ್ ಬಾಬಾ ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆಯೊಂದಿಗೆ ಮುಖಾಂ ಜಿಯಾರತ್ ಬಳಿಕ ಜುಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಸೀದಿಯ ಖತಿಬ್ ಅಲಿ ಸಖಾಫಿ ಉದ್ಘಾಟನೆ ಮಾಡಲಿದ್ದಾರೆ. ಧಾರ್ಮಿಕ ಪಂಡಿತ ಸಯ್ಯದ್ ಜಾಫರ್ ಸಾದಿಕ್, ತಂಗಳ್ ಕೊಂಬೋಳ್ ದುಆ ನೇತೃತ್ವ ವಹಿಸಲಿದ್ದಾರೆ.

    10 ರಂದು ರಾತ್ರಿ ಶಾಕಿರ್ ದಾರಿಮಿ ಕೇರಳ ಇವರು ಪ್ರವಚನ ಮಾಡಲಿದ್ದಾರೆ. 11 ರಂದು ರಾತ್ರಿ ಲುಖುಮಾನುಲ್ ಹಕೀಮ್ ಸಖಾಫಿ ಅವರಿಂದ ಪ್ರವಚನ ಹಾಗೂ 12ರಂದು ಸಂಜೆ 7ಕ್ಕೆ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಕನ್ನಡ ಮಠದ ಶ್ರೀ ಚನ್ನಬಸವ ದೇಸಿ ಕೇಂದ್ರ ಸ್ವಾಮೀಜಿ, ಪಾಲಿಬೆಟ್ಟ ಲೂರ್ಡ್ಸ್ ಚರ್ಚ್ ಫಾ. ಶಶಿಕುಮಾರ್, ಶೈಖುನ ಎಂ.ಎಂ. ಅಬ್ದುಲ್ಲ ಫೈಜಿ, ಸಮಸ್ತ ಕೇಂದ್ರ ಮುಶಾವರ ಸದಸ್ಯರು, ಸಮೀರ್ ಎ.ಎಚ್., ಅಶ್ರಫ್ ಅಪ್‌ಸನಿ, ಅನ್ವಾರಲ್ ಹುದಾ, ವಕ್ಫ್ ಬೋಡ್ ಮಾಜಿ ಅಧ್ಯಕ್ಷ ಶಾಫಿ ಸಹದಿ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಎಸ್ಪಿ ರಾಮರಾಜನ್, ಟಾಟಾ ಕಾಫಿ ಸಂಸ್ಥೆ ಉಪಾಧ್ಯಕ್ಷ ಎಂ.ಬಿ. ಗಣಪತಿ, ಕಾಯಂಬೆಟ್ಟ ಎಸ್ಟೇಟ್‌ನ ಮಾಲೀಕ ಕಾರ್ತಿ ಪಿ. ಚಿದಂಬರಂ ಇತರರು ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts