ಬೆಂಗಳೂರು: ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ.
ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್ ಅವರ ಹೆಸರನ್ನು ಸದನದಲ್ಲಿಂದು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಖಾದರ್ ಹೆಸರನ್ನು ಅನುಮೋದಿಸಿದರು. ನಂತರ ಬಹುಮತದ ಮೂಲಕ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ಒಂದು ರಸ್ತೆ ಗುಂಡಿಗೆ 1 ಲಕ್ಷ ರೂ. ದಂಡ! ಗುತ್ತಿಗೆದಾರರಿಗೆ ಬಿಗ್ ಶಾಕ್
ಆಯ್ಕೆಯಾದ ಬಳಿಕ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಸಭಾಧ್ಯಕ್ಷರ ಹೆಸರನ್ನು ಸದನದಲ್ಲಿ ಘೋಷಣೆ ಮಾಡಿದರು. ನಂತರ ಯು.ಟಿ. ಖಾದರ್ ಅವರು ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದರು.
ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡು ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿದರು.
ಕರೊನಾ ಹೋಯ್ತಲ್ಲ ಅಂತ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಎಚ್ಚರಿಕೆ ನೀಡಿದ ಡಬ್ಲ್ಯುಎಚ್ಒ
ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್ಮ್ಯಾನ್ಗೆ ಚಪ್ಪಲಿಯಿಂದ ಹಲ್ಲೆ