More

    ಪೊಲೀಸರ ಗುಂಡಿನ ದಾಳಿಯಿಂದ ಪ್ರತಿಭಟನಾಕಾರರು ಮೃತಪಟ್ಟಿಲ್ಲ: ಉತ್ತರ ಪ್ರದೇಶ ಸಿಎಂ ಯೋಗಿ

    ಲಕ್ನೋ: ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರು ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿಲ್ಲ. ಬದಲಾಗಿ ಅವರ ನಡುವೆ ಗಲಾಟೆ ನಡೆದು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

    ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಪ್ರತಿಪಕ್ಷಗಳು ಇವರನ್ನು ಪೊಲೀಸರು ಗುಂಡು ಹಾರಿಸಿ ಸಾಯಿಸಿದ್ದಾರೆ ಎನ್ನುತ್ತಿವೆ. ಆದರೆ ಅವರ ನಡುವೆಯೇ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸಾಯುವ ಉದ್ದೇಶ ಹೊಂದಿ ಮನೆಯಿಂದ ಹೊರಗೆ ಬಂದವರನ್ನು ತಡೆಯುವುದು ಹೇಗೆ ಸಾಧ್ಯ. ತೊಂದರೆ ಉಂಟುಮಾಡುವವರು ಇನ್ನೊಬ್ಬ ತೊಂದರೆ ಉಂಟುಮಾಡುವವರ ಗುಂಡಿನ ದಾಳಿಯಿಂದ ಮೃತಪಟ್ಟರು. ಈ ಪ್ರಕರಣದಲ್ಲಿ ಪೊಲೀಸರನ್ನು ಟೀಕಿಸುವ ಬದಲು ಅವರನ್ನು ಮೆಚ್ಚಬೇಕು ಎಂದು ಹೇಳಿದರು.

    ಪೊಲೀಸರ ಗುಂಡಿನಿಂದ ಒಬ್ಬರು ಸತ್ತಿಲ್ಲ. ಪೌರತ್ವ ಕಾಯ್ದೆ ವಿರೋಧಿ ನಡೆಯುತ್ತಿರುವ ಪ್ರತಿಭಟನೆ ದೊಡ್ಡ ಪಿತೂರಿ. ಇದಕ್ಕೆ ಹಲವರು ಹಣಕಾಸಿನ ಸಹಾಯ ಮಾಡುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts