More

    ಉತ್ತರ ಪ್ರದೇಶ ಅಭಿವೃದ್ಧಿ ಮಾಯಾವತಿ ಕೊಡುಗೆ

    ಚಿಕ್ಕಮಗಳೂರು: ಸಣ್ಣ ವಯಸ್ಸಿನಲ್ಲೇ ಉತ್ತರ ಪ್ರದೇಶದಂಥ ಅತಿ ದೊಡ್ಡ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಯಾರಿಗೂ, ಯಾವುದಕ್ಕೂ ಹೆದರದೆ ಜನಪರವಾಗಿ ಕೆಲಸ ಮಾಡಿದ್ದು ಮಾಯಾವತಿ ಅವರ ಹೆಗ್ಗಳಿಕೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಬಿ.ಕೆ.ಸುಧಾ ತಿಳಿಸಿದರು.

    ನಗರದ ಬಿಎಸ್‌ಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಲು ಮೂಲ ಕಾರಣರಾಗಿದ್ದು ಮಾಯಾವತಿ ಎಂದು ಶ್ಲಾಘಿಸಿದರು.
    ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಮಾಯಾವತಿ ಅವರು ದೇಶದ ಪ್ರಧಾನಿಯಾದರೆ ಸಂವಿಧಾನವನ್ನು ಇಡಿಯಾಗಿ ಜಾರಿಗೆ ತರುತ್ತಾರೆ. ಬಡವರು, ಹಿಂದುಳಿದವರು, ಕೆಳವರ್ಗದವರು ನೆಮ್ಮದಿಯಿಂದ ಬದುಕುವ ಹಾಗೆ ಕಾರ್ಯನಿರ್ವಹಿಸುತ್ತಾರೆ. ಇದನ್ನು ಪಕ್ಷದ ಕಾರ್ಯಕರ್ತರು, ಕೆಳವರ್ಗಗಳ ಜನ ಅರ್ಥ ಮಾಡಿಕೊಳ್ಳಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿಯನ್ನು ಬೆಂಬಲಿಸಬೇಕು ಎಂದರು.
    ಲೋಕಸಭಾ ಕ್ಷೇತ್ರದ ಸಂಯೋಜಕ ಪಿ.ಪರಮೇಶ್ವರ್, ಅಸೆಂಬ್ಲಿ ಅಧ್ಯಕ್ಷ ಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್, ಉಪಾಧ್ಯಕ್ಷ ಸಿದ್ದಯ್ಯ, ಜಿಲ್ಲಾ ಉಪಾಧ್ಯಕ್ಷೆ ಕೆ.ಎಸ್.ಮಂಜುಳಾ, ಕಾರ್ಯದರ್ಶಿ ಪುಟ್ಟಸ್ವಾಮಿ, ಲೋಕಸಭಾ ಕ್ಷೇತ್ರದ ಸಂಯೋಜಕ ಕೆ.ಆರ್.ಗಂಗಾಧರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts