More

    ಉತ್ತರ ಕನ್ನಡ ಜಿಲ್ಲಾಧಿಕಾರಿ ಬದಲು

    ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಗಂಗೂಬಾಯಿ ರಮೇಶ ಮಾನಕರ್ ಅವರನ್ನು ನೇಮಿಸಲಾಗಿದೆ.
    ಗಂಗೂಬಾಯಿ ಮಾನಕರ್ 1998 ರ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿದ್ದಾರೆ. 2012 ರಲ್ಲಿ ಐಎಎಸ್ ಗೆ ಭಡ್ತಿ ಹೊಂದಿದ್ದರು. ಅವರು ಸದ್ಯ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಕುಮಟಾ ಎಸಿಯಾಗಿ ಕಾರ್ಯನಿರ್ವಹಿಸಿದ್ದರು.
    ಪ್ರಭುಲಿಂಗ ಕವಳಿಕಟ್ಟಿ ಅವರು 9 ತಿಂಗಳ ಹಿಂದಷ್ಟೇ ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಈಗ ಅವರಿಗೆ ಬೇರೆ ಸ್ಥಾನ ತೋರಿಸಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts