More

    ನದಿಯಲ್ಲಿ ಕೊಚ್ಚಿಹೋದ ಕಾರು, 9 ಮಂದಿ ಸಾವು, ಬದುಕುಳಿದ ಬಾಲಕಿ!

    ಡೆಹ್ರಾಡೂನ್​: ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ನಡುವೆ ಅನಾಹುತಗಳು ಹೆಚ್ಚಾಗುತ್ತಲೇ ಇವೆ. ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದರೆ, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

    ಉತ್ತರಾಖಂಡದಲ್ಲೂ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ ಧ್ಹೇಲಾ ನದಿಯ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಓರ್ವ ಬಾಲಕಿ ಬದುಕುಳಿದಿದ್ದಾಳೆ.

    ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ. ತೀವ್ರ ಮಳೆಯಿಂದಾಗಿ ಶುಕ್ರವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ಕುಮೌನ್ ವಲಯದ ಡಿಐಜಿ ಆನಂದ್ ಭರನ್ ತಿಳಿಸಿದ್ದಾರೆ.

    ಈ ಮಧ್ಯೆ ಉತ್ತರಾಖಂಡದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ವ್ಯಕ್ತಿ ಬುಧವಾರ ನೀರಿನಲ್ಲಿ ಕೊಚ್ಚಿಹೋದ ಘಟನೆಯೂ ವರದಿಯಾಗಿದೆ. (ಏಜೆನ್ಸೀಸ್​)

    ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಗೆ ತೀವ್ರ ಖಂಡನೆ: ಸ್ನೇಹಿತನ ಕುರಿತು ಪ್ರಧಾನಿ ಮೋದಿ ಟ್ವೀಟ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts