More

    ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ಉತ್ತರಾಖಂಡ: ಮಾದರಿ ನಿರ್ಧಾರ ತೆಗೆದುಕೊಂಡ ಸಿಎಂ

    ಡೆಹ್ರಾಡೂನ್: ಉತ್ತರಾಖಂಡದಲ್ಲಿ ಧಾರಾಕಾರವಾಗಿ ಸುರಿದ ಅವಿರತ ಮಳೆಯಿಂದಾಗಿ ಈವರೆಗೆ 75 ಜನರು ಸಾವಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಸುಮಾರು 7,000 ಕೋಟಿ ರೂಪಾಯಿಯಷ್ಟು ಆಸ್ತಿಹಾನಿ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

    ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಅವರು ತಮ್ಮ ಅಕ್ಟೋಬರ್​ ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗೆಗಿನ ತಮ್ಮ ನಿರ್ಧಾರವನ್ನು ಟ್ವಿಟರ್​ ಮೂಲಕ ತಿಳಿಸಿರುವ ಧಾಮಿ, ಸಚಿವಾಲಯದ ಆಡಳಿತ ವಿಭಾಗಕ್ಕೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

    ಪ್ರಾಕೃತಿಕ ವಿಕೋಪಗಳಾದಾಗ ದೇಶದ ಮತ್ತು ಜಗತ್ತಿನ ವಿವಿಧ ಮೂಲೆಗಳಿಂದ ನೆರವು ಹರಿದುಬರುವುದು ಸಾಮಾನ್ಯ. ಈ ನಿಟ್ಟಿನಲ್ಲಿ ಅನುಕೂಲಕರ ಸ್ಥಿತಿಯಲ್ಲಿರುವ ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂಬ ಸಂಕೇತವಾಗಿ ಸಿಎಂ ಧಾಮಿ ತೆಗೆದುಕೊಂಡಿರುವ ಈ ನಿರ್ಧಾರ ಪ್ರಶಂಸಾರ್ಹ ಎಂದು ನೆಟ್ಟಿಗರು ಪ್ರಶಂಸಿಸಿದ್ದಾರೆ.

    ಜಲಾಶಯದಲ್ಲಿ ಹರಿದುಹೋದ ರೈತ; 70 ಕಿಮೀ ದೂರದಲ್ಲಿ ಶವ ಪತ್ತೆ

    ಪ್ರತಿ ಬಾರಿ ವಿಮಾನ ನಿಲ್ದಾಣದಲ್ಲಿ ಹಿಂಸೆ! ಪ್ರಧಾನಿ ಮೋದಿಗೆ ಹಿರಿಯ ನಟಿಯ ದೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts