ಡೆಹ್ರಾಡೂನ್: ಉತ್ತರಾಖಂಡದಲ್ಲಿ ಧಾರಾಕಾರವಾಗಿ ಸುರಿದ ಅವಿರತ ಮಳೆಯಿಂದಾಗಿ ಈವರೆಗೆ 75 ಜನರು ಸಾವಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಸುಮಾರು 7,000 ಕೋಟಿ ರೂಪಾಯಿಯಷ್ಟು ಆಸ್ತಿಹಾನಿ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ಅಕ್ಟೋಬರ್ ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗೆಗಿನ ತಮ್ಮ ನಿರ್ಧಾರವನ್ನು ಟ್ವಿಟರ್ ಮೂಲಕ ತಿಳಿಸಿರುವ ಧಾಮಿ, ಸಚಿವಾಲಯದ ಆಡಳಿತ ವಿಭಾಗಕ್ಕೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.
राज्य में आई प्राकृतिक आपदा के दृष्टिगत मैंने माह अक्टूबर, 2021 का अपना वेतन मुख्यमंत्री राहत कोष में देने का फैसला लिया है।
इस संबंध में अपर मुख्य सचिव, सचिवालय प्रशासन विभाग को आवश्यक कार्यवाही करने के निर्देश भी दे दिए हैं।
— Pushkar Singh Dhami (@pushkardhami) October 22, 2021
ಪ್ರಾಕೃತಿಕ ವಿಕೋಪಗಳಾದಾಗ ದೇಶದ ಮತ್ತು ಜಗತ್ತಿನ ವಿವಿಧ ಮೂಲೆಗಳಿಂದ ನೆರವು ಹರಿದುಬರುವುದು ಸಾಮಾನ್ಯ. ಈ ನಿಟ್ಟಿನಲ್ಲಿ ಅನುಕೂಲಕರ ಸ್ಥಿತಿಯಲ್ಲಿರುವ ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂಬ ಸಂಕೇತವಾಗಿ ಸಿಎಂ ಧಾಮಿ ತೆಗೆದುಕೊಂಡಿರುವ ಈ ನಿರ್ಧಾರ ಪ್ರಶಂಸಾರ್ಹ ಎಂದು ನೆಟ್ಟಿಗರು ಪ್ರಶಂಸಿಸಿದ್ದಾರೆ.
ಪ್ರತಿ ಬಾರಿ ವಿಮಾನ ನಿಲ್ದಾಣದಲ್ಲಿ ಹಿಂಸೆ! ಪ್ರಧಾನಿ ಮೋದಿಗೆ ಹಿರಿಯ ನಟಿಯ ದೂರು