ನವದೆಹಲಿ: ಜಗತ್ತಿನಾದ್ಯಂತ ಒಮಿಕ್ರಾನ್ ಹಾವಳಿ ಹೆಚ್ಚುತ್ತಿರುವ ನಡುವೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದ್ದಕ್ಕಿದ್ದಂತೆ ಲೈವ್ ಬಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
ಒಮಿಕ್ರಾನ್ ಹಿನ್ನೆಲೆಯಲ್ಲಿ ಭಾರತ ಒಂದಷ್ಟು ಕ್ರಮಗಳನ್ನು ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಪ್ರಮುಖ ನಿರ್ಣಯ ಕೈಗೊಂಡಿದ್ದೇವೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ಕ್ರಿಸ್ಮಸ್ನ ಈ ಶುಭದಿನವೇ ಆ ನಿರ್ಣಯವನ್ನು ಘೋಷಿಸಲು ಸೂಕ್ತ ದಿನ ಎಂದಿರುವ ಮೋದಿ, ಕರೊನಾ ನಿಯಂತ್ರಣ ಹಾಗೂ ತಡೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಘೋಷಿಸಿದರು.
ಇದನ್ನೂ ಓದಿ: ಹೊಸ ವರ್ಷಕ್ಕೆ ಒಂದೇ ವಾರ, ಹೊಸ ಹರ್ಷಕ್ಕೂ ಮೂಗುದಾರ; ಪಬ್, ಬಾರ್-ರೆಸ್ಟೋರೆಂಟ್ಗಳಿಗೆ ಪೊಲೀಸರ ಖಡಕ್ ಎಚ್ಚರಿಕೆ
18 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ, ನೀಡಲಾಗುತ್ತಿದೆ. ಇದೀಗ 15ರಿಂದ 18ರ ವಯೋಮಾನದವರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಜ. 3ರಿಂದಲೇ ಆ ಲಸಿಕೀಕರಣ ಆರಂಭವಾಗಲಿದೆ. ಇದರಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸುರಕ್ಷೆ ಸಿಗುವ ಜತೆಗೆ ಅವರ ಪಾಲಕರ ಆತಂಕವನ್ನೂ ಕಡಿಮೆ ಮಾಡಬಹುದು ಎಂದು ಪ್ರಧಾನಿ ತಿಳಿಸಿದ್ದಾರೆ.
ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?
ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್ ಒಮಿಕ್ರಾನ್ನ ರೋಗಲಕ್ಷಣ!