ರಾಹುಲ್​ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ, ಇದಕ್ಕಾಗಿ ಯಾವುದೇ ವಿಶೇಷ ಯೋಜನೆಯಿಲ್ಲ: Vaibhav Suryavanshi

Vaibhav Suryavanshi

ನವದೆಹಲಿ: ನವೆಂಬರ್​​ 24-25ರಂದು ನಡೆದ ಐಪಿಎಲ್​ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 1.10 ಕೋಟಿ ರೂಪಾಯಿಗೆ ಬಿಕರಿಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದ 13 ವರ್ಷದ ಯುವ ಆಟಗಾರ ವೈಭವ್​ ಸೂರ್ಯವಂಶಿ (Vaibhav Suryavanshi) ಟೂರ್ನಿಯ ಇತಿಹಾಸದಲ್ಲೇ ಕೋಟ್ಯಧಿಪತಿಯಾದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್​ ಪಾಲಾದ ವೈಭವ್​ ಕೋಚ್​ ರಾಹುಲ್​ ದ್ರಾವಿಡ್​ ಅವರ ಮಾರ್ಗದರ್ಶನದಲ್ಲಿ ಆಡಲು ಉತ್ಸುಕರಾಗಿದ್ದು, ಈ ಬಗ್ಗೆ ಮಾತನಾಡಿದ್ಧಾರೆ.

ಎಎನ್​ಐಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ವೈಭವ್ (vaibhav Suryavanshi)​, ನನಗೆ ಐಪಿಎಲ್​​ಗಿಂತ ರಾಹುಲ್​ ದ್ರಾವಿಡ್​ ಅವರ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ. ನಾನು ಐಪಿಎಲ್​ಗಾಗಿ ವಿಶೇಷ ಯೋಜನೆಯನ್ನು ಹಾಕಿಕೊಂಡಿಲ್ಲ. ಆಡಲು ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತಸಗೊಂಡಿದ್ದೇನೆ. ದ್ರಾವಿಡ್ ಸರ್ ಮಾರ್ಗದರ್ಶನದಲ್ಲಿ ಆಡಲು ಉತ್ಸುಕನಾಗಿದ್ದೇನೆ ಎಂದು ಯುವ ಆಟಗಾರ ವೈಭವ್​ ಸೂರ್ಯವಂಶಿ ಹೇಳಿದ್ದಾರೆ.

18ನೇ ಆವೃತ್ತಿಯ ಐಪಿಎಲ್​ಗೆ (IPl) ಸಂಬಂಧಿಸಿದ ಕೆಲಸಗಳು ಈಗಾಗಲೇ ಆರಂಭಗೊಂಡಿದ್ದು, ಮುನ್ನುಡಿ ಎಂಬಂತೆ ನವೆಂಬರ್​ 24-25ರಂದು ನಡೆದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಹಣದ ಹೊಳೆಯೇ ಹರಿದಿತ್ತು. ಮೊದಲಿಗೆ ಐಪಿಎಲ್​ ಹರಾಜು ಪ್ರಕ್ರಿಯೆಗೆ ಬಾಲಕ ನೋಂದಾಯಿಸಿದ ಸುದ್ದಿ ಹೊರಬಿದ್ದಾಗ ಈತನನ್ನು ಯಾರು ಖರೀದಿಸುವುದಿಲ್ಲ ಎಂದು ಊಹಿಸಲಾಗಿತ್ತು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals)​ ಹಾಗೂ ರಾಜಸ್ಥಾನ ರಾಯಲ್ಸ್​ (Rajasthan Royals) ನಡುವೆ ನಡೆದ ಪೈಫೋಟಿಯಲ್ಲಿ ಈತನನ್ನು ಆರ್​ಆರ್​​ (RR) ಫ್ರಾಂಚೈಸಿ 1.10 ಕೋಟಿ ರೂಪಾಯಿಗೆ ಬಿಡ್ ಮಾಡುವ ಮೂಲಕ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿತು.

ಐಪಿಎಲ್ (IPL) ಇತಿಹಾಸದಲ್ಲೇ ಮಾರಾಟವಾದ ಅತ್ಯಂತ ಕಿರಿಯ ಆಟಗಾರ ಎನ್ನುವ ಸಾಧನೆ ಮಾಡಿದ್ದಾರೆ. ರಾಜಸ್ಥಾನ ರಾಯಲ್ಸ್‌ಗೆ (Rajasthan Royals) ಮುಖ್ಯ ತರಬೇತುದಾರರಾಗಿ ಹಿಂದಿರುಗಿದ ರಾಹುಲ್ ದ್ರಾವಿಡ್ (Rahul Dravid) ವೈಭವ್ ಸೂರ್ಯವಂಶಿ (Vaibhav Suryavanshi) ಖರೀದಿಸಲು ಆಸಕ್ತಿ ತೋರಿದ್ದರಿಂದ ಅವರನ್ನು ರಾಜಸ್ಥಾನ ರಾಯಲ್ಸ್ 1.10 ಕೋಟಿ ರೂ. ಹಣ ನೀಡಿ ಖರೀದಿ ಮಾಡಿದೆ.

ಬಿಹಾರದ ಸಮಸ್ತಿಪುರದವನಾದ ಈ ಬಾಲಕ ಈಗಾಗಲೇ ಭಾರತ ಅಂಡರ್​-19  ಪರ 2 ಯೂತ್​​ ಟೆಸ್ಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತ್ರಿಶತಕ ಬಾರಿಸಿದ ಸಾಧನೆಯನ್ನೂ ಮಾಡಿದ್ದಾನೆ. ಇನ್ನೂ ಮೊದಲನೆಯ ಐಪಿಎಲ್​ ಹರಾಜಿನಲ್ಲಿ (IPL Auction) ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಬಾಲಕ ಹೊಸ ಸಂಚಲನ ಸೃಷ್ಟಿಸಿದ್ದಾನೆ.

ಪ್ರತಿ ಬಾರಿ ಇದನ್ನೇ ಮಾಡ್ತೀರಾ… ಗೆಳೆಯನ ವಿರುದ್ಧ ತಿರುಗಿಬಿದ್ದ ಗೆಳತಿ; Bigg Boss ಮನೆಯಲ್ಲಿ ಅಷ್ಟಕ್ಕೂ ನಡೆದಿದ್ದಾರೂ ಏನು?

Champions Trophy ಸ್ವರೂಪದಲ್ಲಿ ಪ್ರಮುಖ ಬದಲಾವಣೆ? ಭಾರತ-ಪಾಕ್​ ವಿವಾದದ ನಡುವೆಯೇ ಕೇಳಿ ಬಂತು ಹೊಸ ವಿಚಾರ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…