More

    ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…

    ಬೆಂಗಳೂರು: ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ.

    ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್​ ಸಿನಿಮಾದ ನಟ ವಿದ್ಯಾಭರಣ್​ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ-ಪ್ರತ್ಯಾರೋಪ ಚರ್ಚೆಯಾಗುತ್ತಿದ್ದು, ಇದರಿಂದ ಮನನೊಂದಿರುವ ವೈಷ್ಣವಿ ಗೌಡ ಇನ್​ಸ್ಟಾಗ್ರಾಂ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

    ನಾವಿದನ್ನು (ನಿಶ್ಚಿತಾರ್ಥ) ಮುರಿದುಕೊಂಡಿದ್ದೇವೆ. ಈ ವಿಚಾರವನ್ನು ಮತ್ತಷ್ಟು ಎಳೆಯಬೇಡಿ ಎಂದು ನಾನು ಮಾಧ್ಯಮ ಮತ್ತು ಪ್ರತಿಯೊಬ್ಬರಲ್ಲೂ ಕೇಳಿಕೊಳ್ಳುತ್ತೇನೆ. ಇಲ್ಲಿಗೆ ಇದನ್ನು ಬಿಟ್ಟುಬಿಡಿ. ಯಾರು ನನಗೆ ಶುಭಕೋರಿದರೋ ಅವರೆಲ್ಲರಿಗೂ ನನ್ನ ಧನ್ಯವಾದಗಳು ಎಂದಿದ್ದಾರೆ.

    ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…

    ಏನಿದು ವಿವಾದ?
    ಕೆಲ ದಿನಗಳ ಹಿಂದಷ್ಟೇ ಅಗ್ನಿಸಾಕ್ಷಿ (Agnisakshi) ಧಾರಾವಾಹಿ ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) ಅಲಿಯಾಸ್​ ಸನ್ನಿಧಿ (Sannidhi) ಅವರ ನಿಶ್ಚಿತಾರ್ಥ (Engagement) ದ ಸುದ್ದಿ ಹರಿದಾಡಿತ್ತು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಫೋಟೋಗಳು ಸಹ ವೈರಲ್​ ಆಗಿ, ಮದುವೆ ಆಗುವುದು ಖಚಿತ ಎಂಬ ಸುದ್ದಿಯು ವೈರಲ್​ ಆಗಿತ್ತು. ಆದರೆ, ಇದೀಗ ವೈಷ್ಣವಿ ಅವರಿಗೆ ಮದುವೆಗೂ ಮುನ್ನವೇ ಮೋಸ ಆಗಿದೆ ಎಂದು ಮಾತುಗಳು ಕೇಳಿಬರುತ್ತಿವೆ.

    ವಿರಾಜ್ (Viraj Kannda Film) ಸಿನಿಮಾದ ನಾಯಕ ವಿದ್ಯಾಭರಣ್ (Vidyabharan K S) ಎಂಬುವರ ಜತೆ ವೈಷ್ಣವಿ ನಿಶ್ಚಿತಾರ್ಥ ನೆರವೇರಿತ್ತು. ಫೋಟೋದಲ್ಲಿ ನಿವೃತ್ತ ಐಪಿಎಸ್​ ಅಧಿಕಾರಿ ಶಂಕರ ಬಿದರಿ ಅವರು ಕೂಡ ಇದ್ದರು. ಫೋಟೋ ವೈರಲ್ ಆದ ಬಳಿಕ ಸ್ಪಷ್ಟನೆ ನೀಡಿದ್ದ ವೈಷ್ಣವಿ, ಎಂಗೇಜ್ಮೆಂಟ್ ಆಗಿಲ್ಲ, ಹುಡುಗನ ಕಡೆಯವರು ಬಂದು ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ ಎಂದಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಇಬ್ಬರು ಹುಡುಗಿಯರು ಅಖಾಡಕ್ಕಿಳಿದಿದ್ದಾರೆ. ಆ ಹುಡುಗಿಯರಿಗೂ ಹಾಗೂ ವಿರಾಜ್​ಗೂ ಏನು ಸಂಬಂಧ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದರೆ, ವಿರಾಜ್​ ಬಗ್ಗೆ ಸಾಕಷ್ಟು ಗಂಭೀರ ಆರೋಪಗಳನ್ನು ಮಾಡಿದ್ದು, ವೈಷ್ಣವಿಗೆ ಮೋಸ ಆಗಬಾರದು ಎಂದು ಹೇಳಿದ್ದಾರೆ.

    ವೈಷ್ಣವಿ ತುಂಬಾ ಒಳ್ಳೆ ಹುಡುಗಿ. ಆಕೆಗೆ ಅವನಿಂದ ಮೋಸ ಆಗಬಾರದು. ವೈಷ್ಣವಿ ಜೀವನ ಹಾಳಾಗುವುದಕ್ಕೆ ನಾವು ಬಿಡುವುದಿಲ್ಲ. ಆಕೆ ಜತೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ಹುಡುಗ ಸರಿಯಿಲ್ಲ. ವೈಷ್ಣವಿಗೂ ಮೊದಲೇ ಆತ ಐದಾರು ಜನ ಹುಡುಗಿಯರ ಜತೆ ರಿಲೇಷನ್​ಶಿಪ್​ನಲ್ಲಿದ್ದ. ಅಲ್ಲದೆ, ಹುಡುಗಿಯರನ್ನು ಮನೆಗೂ ಸಹ ಕರೆದುಕೊಂಡು ಹೋಗುತ್ತಿದ್ದ. ಆತನ ಕೃತ್ಯಕ್ಕೆ ಅವರ ತಂದೆ-ತಾಯಿಯ ಫುಲ್ ಸಪೋರ್ಟ್ ಇದೆ ಎಂದು ಇಬ್ಬರು ಅನಾಮಧೇಯ ಹುಡುಗಿಯರು ಆರೋಪ ಮಾಡಿದ್ದಾರೆ,

    ಮಾತು ಮುಂದುವರಿಸಿರುವ ಹುಡುಗಿಯರು ಈಗ ನೋಡಿಡಿದರೆ ವೈಷ್ಣವಿ ಅವರ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡಿದ್ದಾನೆ. ತಾನು 150 ಕೋಟಿಗೆ ಬಾಳುತ್ತೇನೆ ಅಂತಾ ಹೇಳಿದ್ದಾರೆ. ಹೀಗಿರುವಾಗ ಅಷ್ಟು ಸಿಂಪಲ್‌ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದೇಕೆ? ವೈಷ್ಣವಿಗೆ ಹಾಗೂ ಅವರ ಕುಟುಂಬಕ್ಕೆ ಈ ವಿದ್ಯಾಭರಣ ಎಂತವನು ಅಂತ ಇನ್ನೂ ಗೊತ್ತಿಲ್ಲ ಅನ್ಸುತ್ತೆ! ಒಂದು ವೇಳೆ ಗೊತ್ತಾದರೆ ವೈಷ್ಣವಿ ಉಗಿದು ಉಪ್ಪಿನಕಾಯಿ ಹಾಕ್ತಾರೆ. ಯಾವುದೇ ಕಾರಣಕ್ಕೂ ವೈಷ್ಣವಿ, ವಿದ್ಯಾಭರಣ್ ಮದುವೆ ಆಗಬಾರದು. ಒಂದ್ವೇಳೆ ಅವರಿಬ್ಬರು ಮದುವೆ ಆದರೆ, ಮೂರು ವರ್ಷವೂ ಸಂಸಾರ ಮಾಡಲ್ಲ. ಯಾವುದೇ ಕಾರಣಕ್ಕೂ ವಿರಾಜ್, ವೈಷ್ಣವಿ ಗೌಡ ಅವರನ್ನು ಬಾಳಸಲ್ಲ. ಅವರಿಬ್ಬರು ಡೈವೋರ್ಸ್ ತೆಗೆಕೊಳ್ಳೋದು ಗ್ಯಾರಂಟಿ ಎಂದಿದ್ದಾರೆ.

    ಮುಂದೆಂದೋ ಅವರ ಲೈಫ್ ಹಾಳಾಗುವ ಬದಲು ಈಗಲೇ ಮದುವೆ ನಿಂತು ಹೋಗಲಿ. ನಟಿ ವೈಷ್ಣವಿ ಗೌಡ (Vaishnavi Gowda) ಬದುಕು ಅಲ್ಲೋಲ-ಕಲ್ಲೋಲ ಆಗಬಾರದು. ನಾವು ಇಷ್ಟು ಹೇಳಿದ ಮೇಲೂ ಕೂಡ ವೈಷ್ಣವಿ ಹಾಗೂ ಅವರ ಕುಟುಂಬಸ್ಥರು ವಿದ್ಯಾಭರಣ್​ (Vidyabharan K S) ಕಡೆ ಮಾತನಾಡಿದರೆ ನಾವು ತಾನೇ ಏನು ಮಾಡುವುದಕ್ಕೆ ಆಗುತ್ತೆ? ಯಾರಾದರೂ ಹಾಳಾಗಿ ಹೋಗಲಿ ಅಂತ ಸುಮ್ಮನಾಗುತ್ತೇವೆ ಎಂದು ಆ ಇಬ್ಬರು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಆದರೆ, ಇದರಲ್ಲಿ ಎಷ್ಟು ಸತ್ಯ? ಎಷ್ಟು ಮಿತ್ಯ? ಎಂಬುದೇ ಇದೀಗ ಕಾಡುತ್ತಿರುವ ದೊಡ್ಡ ಪ್ರಶ್ನೆ.

    ಹುಡುಗಿಯರಿಬ್ಬರ ಆರೋಪವನ್ನು ತಳ್ಳಿ ಹಾಕಿರುವ ವಿದ್ಯಾಭರಣ್​, ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಕಾನೂನು ರೀತಿಯಲ್ಲಿ ಹೋರಾಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಪ್ತಪದಿ ತುಳಿಯೋ ಮುನ್ನವೇ ಸನ್ನಿಧಿಗೆ ಮೋಸ? ಈ ಸಂಗತಿ ಗೊತ್ತಾದ್ರೆ ವೈಷ್ಣವಿಗೆ ಉಗಿದು ಉಪ್ಪಿನಕಾಯಿ ಹಾಕ್ತಾರಂತೆ!

    ಚುನಾವಣಾ ಪ್ರಚಾರದ ನಡುವೆಯೇ ಕಾಂಗ್ರೆಸ್​ ನಾಯಕನ ಐಷಾರಾಮಿ ಕಾರು ಎಗರಿಸಿದ ಖತರ್ನಾಕ್​ ಖದೀಮರು!

    ಆರ್​ಎಸ್​ಎಸ್​ ನಾಯಕರ ಜತೆ ಸಿಎಂ-ಸಚಿವರ ಸಭೆ ಮುಕ್ತಾಯ; ಇಲ್ಲಿದೆ ಮಾತುಕತೆಯ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts